ಬೈಕ್ ಗೆ ಗೂಡ್ಸ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ ತಾಲೂಕಿನ ಅರಳು ಮಲ್ಲಿಗೆ ಕೆರೆ ಏರಿ ಮೇಲೆ ನಡೆದಿದೆ.
ಲೋಕೇಶ್ (28) ಮೃತಪಟ್ಟ ಬೈಕ್ ಸವಾರ ಎನ್ನಲಾಗಿದೆ.
ಲಾರಿ ಚಾಲಕನ ಅಜಾಗರೂಕತೆ ಹಾಗೂ ನಿರ್ಲಕ್ಷತೆ ಕಾರಣದಿಂದ ಮೊದಲು ಆಲಹಳ್ಳಿ ಬಳಿ ಕಾರಿಗೆ ಡಿಕ್ಕಿ ಹೊಡೆಯಲಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿಗೆ ಡಿಕ್ಕಿ ಹೊಡೆದು ಅಲ್ಲಿಂದ ಪರಾರಿಯಾಗಲು ವೇಗವಾಗಿ ಬಂದು ಕೆರೆ ಏರಿ ಮೇಲೆ ಬೈಕ್ ಗೆ ಡಿಕ್ಕಿ ಹೊಡೆಯಲಾಗಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್ ಗೆ ಹೊಡೆದರೂ ಸಹ ಅಲ್ಲಿ ಏನಾಗಿದೆ ಎಂದು ನೋಡದೆ ಲಾರಿ ಚಾಲಕ ತನ್ನ ಪಾಡಿಗೆ ತಾನು ಲಾರಿ ಚಾಲನೆ ಮಾಡಿಕೊಂಡು ಹೋಗಿದ್ದಾನೆ. ಘಟನೆ ಕಂಡ ಮಧುರೆ ಹೋಬಳಿ ವಿಜಯವಾಣಿ ಪತ್ರಿಕೆ ವಿತರಕ ಹಾಗೂ ವರದಿಗಾರ ಚೇತನ್ ರವರು ಕೂಡಲೇ ಲಾರಿಯನ್ನು ಬೆನ್ನತ್ತಿ ನೆಲಮಂಗಲದ ಬಿನ್ನಮಂಗಲದ ಬಳಿ ಲಾರಿ ಸಮೇತ ಚಾಲಕನನ್ನ ಹಿಡಿದು ನೆಲಮಂಗಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…