ಬೈಕ್ ಗೆ ಗೂಡ್ಸ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ ತಾಲೂಕಿನ ಅರಳು ಮಲ್ಲಿಗೆ ಕೆರೆ ಏರಿ ಮೇಲೆ ನಡೆದಿದೆ.
ಲೋಕೇಶ್ (28) ಮೃತಪಟ್ಟ ಬೈಕ್ ಸವಾರ ಎನ್ನಲಾಗಿದೆ.
ಲಾರಿ ಚಾಲಕನ ಅಜಾಗರೂಕತೆ ಹಾಗೂ ನಿರ್ಲಕ್ಷತೆ ಕಾರಣದಿಂದ ಮೊದಲು ಆಲಹಳ್ಳಿ ಬಳಿ ಕಾರಿಗೆ ಡಿಕ್ಕಿ ಹೊಡೆಯಲಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿಗೆ ಡಿಕ್ಕಿ ಹೊಡೆದು ಅಲ್ಲಿಂದ ಪರಾರಿಯಾಗಲು ವೇಗವಾಗಿ ಬಂದು ಕೆರೆ ಏರಿ ಮೇಲೆ ಬೈಕ್ ಗೆ ಡಿಕ್ಕಿ ಹೊಡೆಯಲಾಗಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್ ಗೆ ಹೊಡೆದರೂ ಸಹ ಅಲ್ಲಿ ಏನಾಗಿದೆ ಎಂದು ನೋಡದೆ ಲಾರಿ ಚಾಲಕ ತನ್ನ ಪಾಡಿಗೆ ತಾನು ಲಾರಿ ಚಾಲನೆ ಮಾಡಿಕೊಂಡು ಹೋಗಿದ್ದಾನೆ. ಘಟನೆ ಕಂಡ ಮಧುರೆ ಹೋಬಳಿ ವಿಜಯವಾಣಿ ಪತ್ರಿಕೆ ವಿತರಕ ಹಾಗೂ ವರದಿಗಾರ ಚೇತನ್ ರವರು ಕೂಡಲೇ ಲಾರಿಯನ್ನು ಬೆನ್ನತ್ತಿ ನೆಲಮಂಗಲದ ಬಿನ್ನಮಂಗಲದ ಬಳಿ ಲಾರಿ ಸಮೇತ ಚಾಲಕನನ್ನ ಹಿಡಿದು ನೆಲಮಂಗಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..
*ಚಿಕ್ಕನಾಯಕನಹಳ್ಳಿ : ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…
ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…
ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…