ಬೈಕ್ ಗೆ ಗೂಡ್ಸ್ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಗೂಡ್ಸ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ ತಾಲೂಕಿನ ಅರಳು ಮಲ್ಲಿಗೆ ಕೆರೆ ಏರಿ ಮೇಲೆ ನಡೆದಿದೆ.

ಲೋಕೇಶ್ (28) ಮೃತಪಟ್ಟ ಬೈಕ್ ಸವಾರ ಎನ್ನಲಾಗಿದೆ.

ಲಾರಿ ಚಾಲಕನ ಅಜಾಗರೂಕತೆ ಹಾಗೂ ನಿರ್ಲಕ್ಷತೆ ಕಾರಣದಿಂದ ಮೊದಲು ಆಲಹಳ್ಳಿ ಬಳಿ ಕಾರಿಗೆ ಡಿಕ್ಕಿ ಹೊಡೆಯಲಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿಗೆ ಡಿಕ್ಕಿ ಹೊಡೆದು ಅಲ್ಲಿಂದ ಪರಾರಿಯಾಗಲು ವೇಗವಾಗಿ ಬಂದು ಕೆರೆ ಏರಿ ಮೇಲೆ ಬೈಕ್ ಗೆ ಡಿಕ್ಕಿ ಹೊಡೆಯಲಾಗಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್ ಗೆ ಹೊಡೆದರೂ ಸಹ ಅಲ್ಲಿ ಏನಾಗಿದೆ ಎಂದು ನೋಡದೆ ಲಾರಿ ಚಾಲಕ ತನ್ನ ಪಾಡಿಗೆ ತಾನು ಲಾರಿ ಚಾಲನೆ ಮಾಡಿಕೊಂಡು ಹೋಗಿದ್ದಾನೆ. ಘಟನೆ ಕಂಡ ಮಧುರೆ ಹೋಬಳಿ ವಿಜಯವಾಣಿ ಪತ್ರಿಕೆ ವಿತರಕ ಹಾಗೂ ವರದಿಗಾರ ಚೇತನ್ ರವರು ಕೂಡಲೇ ಲಾರಿಯನ್ನು ಬೆನ್ನತ್ತಿ ನೆಲಮಂಗಲದ ಬಿನ್ನಮಂಗಲದ ಬಳಿ ಲಾರಿ ಸಮೇತ ಚಾಲಕನನ್ನ ಹಿಡಿದು ನೆಲಮಂಗಲ ಪೊಲೀಸರಿಗೆ ಒಪ್ಪಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..

Ramesh Babu

Journalist

Recent Posts

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

5 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

15 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

16 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

1 day ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

3 days ago