ಬೈಕ್ ಗೆ ಡಿಕ್ಕಿ ಹೊಡೆದು ಸ್ಥಳದಿಂದ ಕಾಲ್ಕಿತ್ತ ಕಾರು: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಹಿಂಬದಿಯಿಂದ ಬಂದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿರುವ ಘಟನೆ ತಾಲೂಕಿನ‌ ಕಾಡನೂರು ಕೈಮರ ಸಮೀಪ ನಡೆದಿದೆ.

ಡಿಕ್ಕಿ ರಭಸಕ್ಕೆ ಬೈಕ್‌ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಪತ್ರಿಕೆಯೊಂದರ ವಿತರಕನಾಗಿದ್ದ ಚೇತನ್ (35)ಎಂಬ ವ್ಯಕ್ತಿಗೆ ಅಪಘಾತದಲ್ಲಿ ಕಾಲುಗಳಿಗೆ ತೀವ್ರ ಪೆಟ್ಟಾಗಿದೆ.

ಕಾರಿನ ಚಾಲಕ ಕನಿಷ್ಠ ಮಾನವೀಯ ಪ್ರಜ್ಞೆ ತೋರದೆ ಡಿಕ್ಕಿ ಹೊಡೆದು ಸ್ಥಳದಿಂದ ಕಾರು ಸಮೇತ ಕಾಲ್ಕಿತ್ತಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ದೊಡ್ಡಬೆಳವಂಗಲ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Leave a Reply

Your email address will not be published. Required fields are marked *