Categories: ಉಡುಪಿ

ಬೈಕ್ ಗೆ ನಾಯಿಯನ್ನು ಕಟ್ಟಿ 6 ಕಿಲೋಮೀಟರ್ ವರೆಗೆ ಎಳೆದೊಯ್ದ ಕಿರಾತಕ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ಅಬ್ದುಲ್ ಖಾದರ್ ಎಂಬ ವ್ಯಕ್ತಿ ಬೀದಿ ನಾಯಿಯನ್ನು ಬೈಕ್‌ಗೆ ಕಟ್ಟಿ 6 ಕಿಲೋಮೀಟರ್ ಎಳೆದೊಯ್ದಿದ್ದಾನೆ.

ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರಾಣಿ ಹಕ್ಕುಗಳ ಕಾರ್ಯಕರ್ತರು ತೀವ್ರವಾಗಿ ಆಕ್ರೋಶವ್ಯಕ್ತಪಡಿಸಿದ್ದಾರೆ. ಆರೋಪಿ ಅಬ್ದುಲ್ ಖಾದರ್ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಜನ ಒತ್ತಾಯಿಸಿದ್ದಾರೆ.

ನಾಯಿಯನ್ನು ಬೈಕ್ ಗೆ ಕಟ್ಟಿ ಸೇಂಟ್ ಮೇರಿಸ್ ಜಂಕ್ಷನ್‌ನಿಂದ ಮಂಚಕಲ್ ಪ್ರದೇಶದ ಕಡೆಗೆ ಎಳೆದೊಯ್ಯುತ್ತಿರುವ ದೃಶ್ಯಗಳು ಕಂಡುಬಂದಿವೆ.

ಶಿರ್ವ ಗ್ರಾಮ ಪಂಚಾಯತ್ ಕಟ್ಟಡದ ಮುಂಭಾಗದಲ್ಲಿ ಘಟನೆ ನಡೆದಿದೆ. ಪ್ರಾಣಿ ದಯಾ ಸಂಘದ ಸದಸ್ಯೆ ಮಂಜುಳಾ ಕರ್ಕೇರ ಅವರು ವಾಟ್ಸ್‌ಆ್ಯಪ್‌ನಲ್ಲಿ ವಿಡಿಯೋ ಬಂದ ನಂತರ ಪೊಲೀಸರಿಗೆ ದೂರು ನೀಡಿದ್ದಾರೆ.

ತನಿಖೆ ವೇಳೆ ಕೊಂಬುಗುಡ್ಡೆ ಮೂಲದ ಖಾದರ್ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುತ್ತಿರುವುದು ಪತ್ತೆಯಾಗಿದೆ. ಹೀಗಾಗಿ, ಪೊಲೀಸರು ಆತನ ವಿರುದ್ಧ ಸೆಕ್ಷನ್ 325 ಬಿಎನ್‌ಎಸ್ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Ramesh Babu

Journalist

Share
Published by
Ramesh Babu

Recent Posts

ಸಿಂಗ್ರಹಳ್ಳಿ ಗ್ರಾಮದ ಗೋಮಾಳ ಜಮೀನು ಉಳ್ಳವರಿಂದಲೇ ಒತ್ತುವರಿ- ಮುನಿಆಂಜಿನಪ್ಪ ಆರೋಪ

ದೇವನಹಳ್ಳಿ: ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸಿಂಗರಹಳ್ಳಿ ಗ್ರಾಮದ ಸರ್ವೆ ನಂಬರ್ -6 ರಲ್ಲಿ ಸುಮಾರು 60…

48 minutes ago

ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾಗಿ ನಟ ಪ್ರಥಮ್ ವ್ಯಂಗ್ಯ ಆರೋಪ: ದಲಿತ ಸಂಘಟನೆ ಆಕ್ರೋಶ: ಠಾಣೆ ಮುಂದೆ ಪ್ರಥಮ್ ಗೆ ಮಸಿ ಬಳಿಯುವ ಯತ್ನ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾಗಿ ವ್ಯಂಗ್ಯವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪ್ರಥಮ್ ಗೆ ಅಂಬೇಡ್ಕರ್ ಸೇನೆ ಹೋರಾಟಗಾರರು ದೊಡ್ಡಬಳ್ಳಾಪುರ…

11 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ಸ್ಥಳ ಮಹಜರಿನಲ್ಲಿ ಘಟನೆ ಬಗ್ಗೆ ಪೊಲೀಸರಿಗೆ ಇಂಚಿಂಚು ಮಾಹಿತಿ ನೀಡಿದ ಪ್ರಥಮ್

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ರೇಣುಕಾ ಯಲ್ಲಮ್ಮ ದೇವಾಲಯದ…

15 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಟ ಪ್ರಥಮ್

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ನಟ ಪ್ರಥಮ್…

16 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ ಜಾಮೀನು ಮಂಜೂರು

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ, ದೊಡ್ಡಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯದ ವತಿಯಿಂದ ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ…

17 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ಆರೋಪಿಗಳಾದ ಯಶಸ್ವಿನಿ, ಬೇಕರಿ ರಘು ದೊಡ್ಡಬಳ್ಳಾಪುರ ಕೋರ್ಟ್ ಗೆ ಶರಣು

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು…

21 hours ago