ಬೈಕ್ ಹಾಗೂ ಪ್ಯಾಸೆಂಜರ್ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ತಾಲೂಕಿ ಕೋಡಿಹಳ್ಳಿಯ ಕರಿಯಪ್ಪ ದೇವಾಸ್ಥಾನ ಬಳಿ ನಡೆದಿದೆ.
ದೊಡ್ಡಬಳ್ಳಾಪುರದಿಂದ ಕೋಡಿಹಳ್ಳಿಗೆ ಹೋಗುತ್ತಿದ್ದ ಪ್ಯಾಸೆಂಜರ್ ಆಟೋಗೆ ಕೋಡಿಹಳ್ಳಿಯಿಂದ ದೊಡ್ಡಬಳ್ಳಾಪುರ ಟೌನ್ ಕಡೆ ಅತಿವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿ ರಭಸಕ್ಕೆ ಬೈಕ್ ಸವಾರ ಮನಮೋಹನ್ ಎಂಬ ವ್ಯಕ್ತಿಗೆ ತಲೆಗೆ ತೀವ್ರವಾಗಿ ಪೆಟ್ಟಾಗಿದೆ. ಕೂಡಲೇ ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡ ಬೈಕ್ ಸವಾರ ಮನಮೋಹನ್ ಬೆಂಗಳೂರು ಮೂಲದವನಾಗಿದ್ದು, ಕೋಡಿಹಳ್ಳಿಯ ಅಜ್ಜಿ ಮನೆಯಲ್ಲಿ ಕೆಲದಿನಗಳಿಂದ ವಾಸವಾಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…