ಬೈಕ್ ಹಾಗೂ ಪ್ಯಾಸೆಂಜರ್ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ತಾಲೂಕಿ ಕೋಡಿಹಳ್ಳಿಯ ಕರಿಯಪ್ಪ ದೇವಾಸ್ಥಾನ ಬಳಿ ನಡೆದಿದೆ.
ದೊಡ್ಡಬಳ್ಳಾಪುರದಿಂದ ಕೋಡಿಹಳ್ಳಿಗೆ ಹೋಗುತ್ತಿದ್ದ ಪ್ಯಾಸೆಂಜರ್ ಆಟೋಗೆ ಕೋಡಿಹಳ್ಳಿಯಿಂದ ದೊಡ್ಡಬಳ್ಳಾಪುರ ಟೌನ್ ಕಡೆ ಅತಿವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿ ರಭಸಕ್ಕೆ ಬೈಕ್ ಸವಾರ ಮನಮೋಹನ್ ಎಂಬ ವ್ಯಕ್ತಿಗೆ ತಲೆಗೆ ತೀವ್ರವಾಗಿ ಪೆಟ್ಟಾಗಿದೆ. ಕೂಡಲೇ ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡ ಬೈಕ್ ಸವಾರ ಮನಮೋಹನ್ ಬೆಂಗಳೂರು ಮೂಲದವನಾಗಿದ್ದು, ಕೋಡಿಹಳ್ಳಿಯ ಅಜ್ಜಿ ಮನೆಯಲ್ಲಿ ಕೆಲದಿನಗಳಿಂದ ವಾಸವಾಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…