ಚಿನ್ನದ ಒಡವೆಗಳನ್ನು ಅಡವಿಟ್ಟು ಹಣವನ್ನು ತೆಗೆದುಕೊಂಡು ಮನೆಗೆ ಹೋಗುವಾಗ ಹಿಂಬಾಲಿಸಿಕೊಂಡು ಬಂದು ಕ್ಷಣಾರ್ಧದಲ್ಲಿ 2 ಲಕ್ಷ 19 ಸಾವಿರ ರೂ. ಹಣವನ್ನು ಕದ್ದು ಕಳ್ಳರು ಎಸ್ಕೇಪ್ ಆಗಿರುವ ಘಟನೆ ನಗರದ ವಿದ್ಯಾನಿಧಿ ಕಾಲೇಜು ರಸ್ತೆಯಲ್ಲಿ ನಡೆದಿದೆ.
ಘಟನೆಯ ವಿವರ:
ತಾಲ್ಲೂಕಿನ ಕಾಮನಅಗ್ರಹಾರ ಗ್ರಾಮದ ಮುದ್ದೇಗೌಡ ಎಂಬುವರು ಸಾಲದ ಹಣವನ್ನು ವಾಪಸ್ ಮಾಡಲು ಮನೆಯಲ್ಲಿದ್ದ ಚಿನ್ನದ ಸರ ಸೇರಿದಂತೆ ವಿವಿಧ ಆಭರಣಗಳನ್ನು ನಗರದ ಡಿಕ್ರಾಸ್ ರಸ್ತೆಯಲ್ಲಿರುವ ಫೆಡರಲ್ ಬ್ಯಾಂಕಿನಲ್ಲಿ ಅಡವಿಟ್ಟು ಸುಮಾರು 2 ಲಕ್ಷ 19 ಸಾವಿರ ರೂ. ಪಡೆದಿದ್ದಾರೆ. ಈ ಹಣವನ್ನು ಮೊಪೆಡ್ ಬೈಕ್ ನ ಡಿಕ್ಕಿಯಲ್ಲಿಟ್ಟುಕೊಂಡಿದ್ದಾರೆ. ಊರಿಗೆ ತೆರಳುವ ಮಾರ್ಗದ ಮಧ್ಯೆ ಸಂಬಂಧಿಕರೊಂದಿಗೆ ಮಾತನಾಡಲು
ವಿದ್ಯಾನಿಧಿ ಕಾಲೇಜಿಗೆ ತೆರಳಿದ್ದಾರೆ. ನಂತರ ಕಾಲೇಜ್ನಿಂದ ಹೊರಬಂದು ದ್ವಿಚಕ್ರ ವಾಹನದ ಡಿಕ್ಕಿ ತೆರೆದಿರುವುದನ್ನ ಕಂಡ ಬಳಿಕ ಡಿಕ್ಕಿ ತೆರೆದಾಗ ಹಣ ಇಲ್ಲದಿರುವುದು ತಿಳಿದಿದೆ.
ಈ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕಾಲೇಜಿನ ಸಿಸಿಟಿವಿಯ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿ ವಶಕ್ಕೆ ಪಡೆದಿದ್ದಾರೆ. ಬ್ಯಾಂಕಿನಲ್ಲಿ ಹಣ ಪಡೆದಿದನ್ನು ನೋಡಿರುವ ಕಳ್ಳರು ಬೈಕ್ ನ್ನು ಹಿಂಬಾಲಿಸಿಕೊಂಡು ಬಂದು ಹಣವನ್ನು ದೋಚಿರಬಹುದೆಂದು ಶಂಕೆ ವ್ಯಕ್ತವಾಗಿದೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಬಂಧಿಸಿದೆ.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…