ಚಿನ್ನದ ಒಡವೆಗಳನ್ನು ಅಡವಿಟ್ಟು ಹಣವನ್ನು ತೆಗೆದುಕೊಂಡು ಮನೆಗೆ ಹೋಗುವಾಗ ಹಿಂಬಾಲಿಸಿಕೊಂಡು ಬಂದು ಕ್ಷಣಾರ್ಧದಲ್ಲಿ 2 ಲಕ್ಷ 19 ಸಾವಿರ ರೂ. ಹಣವನ್ನು ಕದ್ದು ಕಳ್ಳರು ಎಸ್ಕೇಪ್ ಆಗಿರುವ ಘಟನೆ ನಗರದ ವಿದ್ಯಾನಿಧಿ ಕಾಲೇಜು ರಸ್ತೆಯಲ್ಲಿ ನಡೆದಿದೆ.
ಘಟನೆಯ ವಿವರ:
ತಾಲ್ಲೂಕಿನ ಕಾಮನಅಗ್ರಹಾರ ಗ್ರಾಮದ ಮುದ್ದೇಗೌಡ ಎಂಬುವರು ಸಾಲದ ಹಣವನ್ನು ವಾಪಸ್ ಮಾಡಲು ಮನೆಯಲ್ಲಿದ್ದ ಚಿನ್ನದ ಸರ ಸೇರಿದಂತೆ ವಿವಿಧ ಆಭರಣಗಳನ್ನು ನಗರದ ಡಿಕ್ರಾಸ್ ರಸ್ತೆಯಲ್ಲಿರುವ ಫೆಡರಲ್ ಬ್ಯಾಂಕಿನಲ್ಲಿ ಅಡವಿಟ್ಟು ಸುಮಾರು 2 ಲಕ್ಷ 19 ಸಾವಿರ ರೂ. ಪಡೆದಿದ್ದಾರೆ. ಈ ಹಣವನ್ನು ಮೊಪೆಡ್ ಬೈಕ್ ನ ಡಿಕ್ಕಿಯಲ್ಲಿಟ್ಟುಕೊಂಡಿದ್ದಾರೆ. ಊರಿಗೆ ತೆರಳುವ ಮಾರ್ಗದ ಮಧ್ಯೆ ಸಂಬಂಧಿಕರೊಂದಿಗೆ ಮಾತನಾಡಲು
ವಿದ್ಯಾನಿಧಿ ಕಾಲೇಜಿಗೆ ತೆರಳಿದ್ದಾರೆ. ನಂತರ ಕಾಲೇಜ್ನಿಂದ ಹೊರಬಂದು ದ್ವಿಚಕ್ರ ವಾಹನದ ಡಿಕ್ಕಿ ತೆರೆದಿರುವುದನ್ನ ಕಂಡ ಬಳಿಕ ಡಿಕ್ಕಿ ತೆರೆದಾಗ ಹಣ ಇಲ್ಲದಿರುವುದು ತಿಳಿದಿದೆ.
ಈ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕಾಲೇಜಿನ ಸಿಸಿಟಿವಿಯ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿ ವಶಕ್ಕೆ ಪಡೆದಿದ್ದಾರೆ. ಬ್ಯಾಂಕಿನಲ್ಲಿ ಹಣ ಪಡೆದಿದನ್ನು ನೋಡಿರುವ ಕಳ್ಳರು ಬೈಕ್ ನ್ನು ಹಿಂಬಾಲಿಸಿಕೊಂಡು ಬಂದು ಹಣವನ್ನು ದೋಚಿರಬಹುದೆಂದು ಶಂಕೆ ವ್ಯಕ್ತವಾಗಿದೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಬಂಧಿಸಿದೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…