ಬೈಕ್ ಹಿಂಬಾಲಿಸಿಕೊಂಡು ಬಂದು 2 ಲಕ್ಷ 19 ಸಾವಿರ ಹಣ ಎಸ್ಕೇಪ್ ಮಾಡಿರೋ ಖದೀಮರು: ಚಿನ್ನದ ಒಡವೆ ಒತ್ತೆಯಿಟ್ಟು ಹಣ ತೆಗೆದುಕೊಂಡು ಹೋಗುವಾಗ ಘಟನೆ

ಚಿನ್ನದ ಒಡವೆಗಳನ್ನು ಅಡವಿಟ್ಟು ಹಣವನ್ನು ತೆಗೆದುಕೊಂಡು ಮನೆಗೆ ಹೋಗುವಾಗ ಹಿಂಬಾಲಿಸಿಕೊಂಡು ಬಂದು ಕ್ಷಣಾರ್ಧದಲ್ಲಿ 2 ಲಕ್ಷ 19 ಸಾವಿರ ರೂ. ಹಣವನ್ನು ಕದ್ದು ಕಳ್ಳರು ಎಸ್ಕೇಪ್ ಆಗಿರುವ ಘಟನೆ ನಗರದ ವಿದ್ಯಾನಿಧಿ ಕಾಲೇಜು ರಸ್ತೆಯಲ್ಲಿ ನಡೆದಿದೆ.

ಘಟನೆಯ ವಿವರ:

ತಾಲ್ಲೂಕಿನ ಕಾಮನಅಗ್ರಹಾರ ಗ್ರಾಮದ ಮುದ್ದೇಗೌಡ ಎಂಬುವರು ಸಾಲದ ಹಣವನ್ನು ವಾಪಸ್ ಮಾಡಲು ಮನೆಯಲ್ಲಿದ್ದ ಚಿನ್ನದ ಸರ ಸೇರಿದಂತೆ ವಿವಿಧ ಆಭರಣಗಳನ್ನು ನಗರದ ಡಿಕ್ರಾಸ್ ರಸ್ತೆಯಲ್ಲಿರುವ ಫೆಡರಲ್ ಬ್ಯಾಂಕಿನಲ್ಲಿ ಅಡವಿಟ್ಟು ಸುಮಾರು 2 ಲಕ್ಷ 19 ಸಾವಿರ ರೂ. ಪಡೆದಿದ್ದಾರೆ. ಈ ಹಣವನ್ನು ಮೊಪೆಡ್ ಬೈಕ್ ನ ಡಿಕ್ಕಿಯಲ್ಲಿಟ್ಟುಕೊಂಡಿದ್ದಾರೆ. ಊರಿಗೆ ತೆರಳುವ ಮಾರ್ಗದ ಮಧ್ಯೆ ಸಂಬಂಧಿಕರೊಂದಿಗೆ ಮಾತನಾಡಲು
ವಿದ್ಯಾನಿಧಿ ಕಾಲೇಜಿಗೆ ತೆರಳಿದ್ದಾರೆ. ನಂತರ ಕಾಲೇಜ್‌ನಿಂದ ಹೊರಬಂದು ದ್ವಿಚಕ್ರ ವಾಹನದ ಡಿಕ್ಕಿ ತೆರೆದಿರುವುದನ್ನ ಕಂಡ ಬಳಿಕ ಡಿಕ್ಕಿ ತೆರೆದಾಗ ಹಣ ಇಲ್ಲದಿರುವುದು ತಿಳಿದಿದೆ.

ಈ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕಾಲೇಜಿನ ಸಿಸಿಟಿವಿಯ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿ ವಶಕ್ಕೆ ಪಡೆದಿದ್ದಾರೆ. ಬ್ಯಾಂಕಿನಲ್ಲಿ ಹಣ ಪಡೆದಿದನ್ನು ನೋಡಿರುವ ಕಳ್ಳರು ಬೈಕ್ ನ್ನು ಹಿಂಬಾಲಿಸಿಕೊಂಡು ಬಂದು ಹಣವನ್ನು ದೋಚಿರಬಹುದೆಂದು ಶಂಕೆ ವ್ಯಕ್ತವಾಗಿದೆ.

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಬಂಧಿಸಿದೆ.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

1 hour ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago