ಚಿನ್ನದ ಒಡವೆಗಳನ್ನು ಅಡವಿಟ್ಟು ಹಣವನ್ನು ತೆಗೆದುಕೊಂಡು ಮನೆಗೆ ಹೋಗುವಾಗ ಹಿಂಬಾಲಿಸಿಕೊಂಡು ಬಂದು ಕ್ಷಣಾರ್ಧದಲ್ಲಿ 2 ಲಕ್ಷ 19 ಸಾವಿರ ರೂ. ಹಣವನ್ನು ಕದ್ದು ಕಳ್ಳರು ಎಸ್ಕೇಪ್ ಆಗಿರುವ ಘಟನೆ ನಗರದ ವಿದ್ಯಾನಿಧಿ ಕಾಲೇಜು ರಸ್ತೆಯಲ್ಲಿ ನಡೆದಿದೆ.
ಘಟನೆಯ ವಿವರ:
ತಾಲ್ಲೂಕಿನ ಕಾಮನಅಗ್ರಹಾರ ಗ್ರಾಮದ ಮುದ್ದೇಗೌಡ ಎಂಬುವರು ಸಾಲದ ಹಣವನ್ನು ವಾಪಸ್ ಮಾಡಲು ಮನೆಯಲ್ಲಿದ್ದ ಚಿನ್ನದ ಸರ ಸೇರಿದಂತೆ ವಿವಿಧ ಆಭರಣಗಳನ್ನು ನಗರದ ಡಿಕ್ರಾಸ್ ರಸ್ತೆಯಲ್ಲಿರುವ ಫೆಡರಲ್ ಬ್ಯಾಂಕಿನಲ್ಲಿ ಅಡವಿಟ್ಟು ಸುಮಾರು 2 ಲಕ್ಷ 19 ಸಾವಿರ ರೂ. ಪಡೆದಿದ್ದಾರೆ. ಈ ಹಣವನ್ನು ಮೊಪೆಡ್ ಬೈಕ್ ನ ಡಿಕ್ಕಿಯಲ್ಲಿಟ್ಟುಕೊಂಡಿದ್ದಾರೆ. ಊರಿಗೆ ತೆರಳುವ ಮಾರ್ಗದ ಮಧ್ಯೆ ಸಂಬಂಧಿಕರೊಂದಿಗೆ ಮಾತನಾಡಲು
ವಿದ್ಯಾನಿಧಿ ಕಾಲೇಜಿಗೆ ತೆರಳಿದ್ದಾರೆ. ನಂತರ ಕಾಲೇಜ್ನಿಂದ ಹೊರಬಂದು ದ್ವಿಚಕ್ರ ವಾಹನದ ಡಿಕ್ಕಿ ತೆರೆದಿರುವುದನ್ನ ಕಂಡ ಬಳಿಕ ಡಿಕ್ಕಿ ತೆರೆದಾಗ ಹಣ ಇಲ್ಲದಿರುವುದು ತಿಳಿದಿದೆ.
ಈ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕಾಲೇಜಿನ ಸಿಸಿಟಿವಿಯ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿ ವಶಕ್ಕೆ ಪಡೆದಿದ್ದಾರೆ. ಬ್ಯಾಂಕಿನಲ್ಲಿ ಹಣ ಪಡೆದಿದನ್ನು ನೋಡಿರುವ ಕಳ್ಳರು ಬೈಕ್ ನ್ನು ಹಿಂಬಾಲಿಸಿಕೊಂಡು ಬಂದು ಹಣವನ್ನು ದೋಚಿರಬಹುದೆಂದು ಶಂಕೆ ವ್ಯಕ್ತವಾಗಿದೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಬಂಧಿಸಿದೆ.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…