ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ಗ್ರಾಪಂ ವ್ಯಾಪ್ತಿಯ ಬೈರಸಂದ್ರ ಗ್ರಾಮದಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ಹಂದಿ ಸಾಕಣೆ ಶೆಡ್ ನಿಂದಾಗಿ ಗ್ರಾಮಸ್ಥರಿಗೆ ತೊಂದರೆಗಳಾಗುತ್ತಿದ್ದು, ಕೂಡಲೇ ಶೆಡ್ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಹಂದಿ ಶೆಡ್ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮಲ್ಲಪ್ಪ ಕೆ.ಯರಗೋಳ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಮಾತನಾಡಿದ ಗ್ರಾಮದ ಮುಖಂಡರಾದ ಲಕ್ಷ್ಮೀಸಾಗರ್, ಮುನಿ ಓಬಳಪ್ಪ, ಸಿದ್ದರಾಜು, ಶ್ರೀಧರ್ ತಾಲೂಕಿನ ದೊಡ್ಡತುಮಕೂರು ಗ್ರಾಪಂ ವ್ಯಾಪ್ತಿಯ ಬೈರಸಂದ್ರ ಗ್ರಾಮದ ಪರಿಮಿತಿಯಲ್ಲಿ ಅಕ್ರಮವಾಗಿ ಯಾವುದೇ ಸಕ್ಷಮ ಪ್ರಾಧಿಕಾರ ಅಥವಾ ಸ್ಥಳೀಯ ಪ್ರಾಧಿಕಾರದಿಂದ ಅನುಮತಿ ಪಡೆಯದೆ, ಹಂದಿ ಸಾಕಣೆ ಶೆಡ್ ನಿರ್ಮಿಸಲಾಗಿದೆ ಎಂದು ಆರೋಪಿಸಿದಲ್ಲದೇ, ಈ ಶೆಡ್ನಿಂದ ಪ್ರತಿನಿತ್ಯ ದುರ್ವಾಸನೆ ಬರುತ್ತಿದ್ದು ಗ್ರಾಮದಲ್ಲಿ ವಾಸನೆ ಸೇರಿದಂತೆ ಅನೇಕ ರೋಗಗಳು ಹರಡುತ್ತಿವೆ. ಮಹಿಳೆಯರು, ಮಕ್ಕಳು ಹೆಚ್ಚಾಗಿ ತೊಂದರೆಗೀಡಾಗುತ್ತಿದ್ದಾರೆ. ಇದಲ್ಲದೇ ಹಂದಿ ಸಾಕಣೆ ಮಾಡಲು ದೊಡ್ಡಬಳ್ಳಾಪುರ ನಗರ ಮತ್ತು ಇತರ ಕಡೆಗಳಿಂದ ಕೋಳಿ ಮತ್ತು ನಗರದ ಹೋಟೆಲ್ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ ತಂದು ಸುಡಲಾಗುತ್ತಿದೆ. ಅರ್ಕಾವತಿ ನದಿ ಪಾತ್ರದ ದೊಡ್ಡತುಮಕೂರು ಕೆರೆಗೆ ಶೆಡ್ನ ಕೊಳಚೆ ನೀರು ಬಿಡಲಾಗುತ್ತಿದೆ. ಅಕ್ರಮ ಹಂದಿ ಸಾಕಣೆ ಶೆಡ್ ಸ್ಥಳಾಂತರ ಹಾಗೂ ಕೆರೆ ಅಂಗಳಕ್ಕೆ ಕಲುಷಿತ ನೀರು ಸೇರುತ್ತಿದೆ. ಈ ಕುರಿತು ಈಗಾಗಲೇ ಹೋರಾಟ ನಡೆಯುತ್ತಿದ್ದು, ಗ್ರಾಪಂಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಿಲ್ಲವಾಗಿದೆ. ಆದ್ದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಶೆಡ್ ಸ್ಥಳಾಂತರ ಮಾಡುವಂತೆ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…