ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ಗ್ರಾಪಂ ವ್ಯಾಪ್ತಿಯ ಬೈರಸಂದ್ರ ಗ್ರಾಮದಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ಹಂದಿ ಸಾಕಣೆ ಶೆಡ್ ನಿಂದಾಗಿ ಗ್ರಾಮಸ್ಥರಿಗೆ ತೊಂದರೆಗಳಾಗುತ್ತಿದ್ದು, ಕೂಡಲೇ ಶೆಡ್ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಹಂದಿ ಶೆಡ್ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮಲ್ಲಪ್ಪ ಕೆ.ಯರಗೋಳ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಮಾತನಾಡಿದ ಗ್ರಾಮದ ಮುಖಂಡರಾದ ಲಕ್ಷ್ಮೀಸಾಗರ್, ಮುನಿ ಓಬಳಪ್ಪ, ಸಿದ್ದರಾಜು, ಶ್ರೀಧರ್ ತಾಲೂಕಿನ ದೊಡ್ಡತುಮಕೂರು ಗ್ರಾಪಂ ವ್ಯಾಪ್ತಿಯ ಬೈರಸಂದ್ರ ಗ್ರಾಮದ ಪರಿಮಿತಿಯಲ್ಲಿ ಅಕ್ರಮವಾಗಿ ಯಾವುದೇ ಸಕ್ಷಮ ಪ್ರಾಧಿಕಾರ ಅಥವಾ ಸ್ಥಳೀಯ ಪ್ರಾಧಿಕಾರದಿಂದ ಅನುಮತಿ ಪಡೆಯದೆ, ಹಂದಿ ಸಾಕಣೆ ಶೆಡ್ ನಿರ್ಮಿಸಲಾಗಿದೆ ಎಂದು ಆರೋಪಿಸಿದಲ್ಲದೇ, ಈ ಶೆಡ್ನಿಂದ ಪ್ರತಿನಿತ್ಯ ದುರ್ವಾಸನೆ ಬರುತ್ತಿದ್ದು ಗ್ರಾಮದಲ್ಲಿ ವಾಸನೆ ಸೇರಿದಂತೆ ಅನೇಕ ರೋಗಗಳು ಹರಡುತ್ತಿವೆ. ಮಹಿಳೆಯರು, ಮಕ್ಕಳು ಹೆಚ್ಚಾಗಿ ತೊಂದರೆಗೀಡಾಗುತ್ತಿದ್ದಾರೆ. ಇದಲ್ಲದೇ ಹಂದಿ ಸಾಕಣೆ ಮಾಡಲು ದೊಡ್ಡಬಳ್ಳಾಪುರ ನಗರ ಮತ್ತು ಇತರ ಕಡೆಗಳಿಂದ ಕೋಳಿ ಮತ್ತು ನಗರದ ಹೋಟೆಲ್ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ ತಂದು ಸುಡಲಾಗುತ್ತಿದೆ. ಅರ್ಕಾವತಿ ನದಿ ಪಾತ್ರದ ದೊಡ್ಡತುಮಕೂರು ಕೆರೆಗೆ ಶೆಡ್ನ ಕೊಳಚೆ ನೀರು ಬಿಡಲಾಗುತ್ತಿದೆ. ಅಕ್ರಮ ಹಂದಿ ಸಾಕಣೆ ಶೆಡ್ ಸ್ಥಳಾಂತರ ಹಾಗೂ ಕೆರೆ ಅಂಗಳಕ್ಕೆ ಕಲುಷಿತ ನೀರು ಸೇರುತ್ತಿದೆ. ಈ ಕುರಿತು ಈಗಾಗಲೇ ಹೋರಾಟ ನಡೆಯುತ್ತಿದ್ದು, ಗ್ರಾಪಂಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಿಲ್ಲವಾಗಿದೆ. ಆದ್ದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಶೆಡ್ ಸ್ಥಳಾಂತರ ಮಾಡುವಂತೆ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…