ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ಗ್ರಾಪಂ ವ್ಯಾಪ್ತಿಯ ಬೈರಸಂದ್ರ ಗ್ರಾಮದಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ಹಂದಿ ಸಾಕಣೆ ಶೆಡ್ ನಿಂದಾಗಿ ಗ್ರಾಮಸ್ಥರಿಗೆ ತೊಂದರೆಗಳಾಗುತ್ತಿದ್ದು, ಕೂಡಲೇ ಶೆಡ್ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಹಂದಿ ಶೆಡ್ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮಲ್ಲಪ್ಪ ಕೆ.ಯರಗೋಳ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಮಾತನಾಡಿದ ಗ್ರಾಮದ ಮುಖಂಡರಾದ ಲಕ್ಷ್ಮೀಸಾಗರ್, ಮುನಿ ಓಬಳಪ್ಪ, ಸಿದ್ದರಾಜು, ಶ್ರೀಧರ್ ತಾಲೂಕಿನ ದೊಡ್ಡತುಮಕೂರು ಗ್ರಾಪಂ ವ್ಯಾಪ್ತಿಯ ಬೈರಸಂದ್ರ ಗ್ರಾಮದ ಪರಿಮಿತಿಯಲ್ಲಿ ಅಕ್ರಮವಾಗಿ ಯಾವುದೇ ಸಕ್ಷಮ ಪ್ರಾಧಿಕಾರ ಅಥವಾ ಸ್ಥಳೀಯ ಪ್ರಾಧಿಕಾರದಿಂದ ಅನುಮತಿ ಪಡೆಯದೆ, ಹಂದಿ ಸಾಕಣೆ ಶೆಡ್ ನಿರ್ಮಿಸಲಾಗಿದೆ ಎಂದು ಆರೋಪಿಸಿದಲ್ಲದೇ, ಈ ಶೆಡ್ನಿಂದ ಪ್ರತಿನಿತ್ಯ ದುರ್ವಾಸನೆ ಬರುತ್ತಿದ್ದು ಗ್ರಾಮದಲ್ಲಿ ವಾಸನೆ ಸೇರಿದಂತೆ ಅನೇಕ ರೋಗಗಳು ಹರಡುತ್ತಿವೆ. ಮಹಿಳೆಯರು, ಮಕ್ಕಳು ಹೆಚ್ಚಾಗಿ ತೊಂದರೆಗೀಡಾಗುತ್ತಿದ್ದಾರೆ. ಇದಲ್ಲದೇ ಹಂದಿ ಸಾಕಣೆ ಮಾಡಲು ದೊಡ್ಡಬಳ್ಳಾಪುರ ನಗರ ಮತ್ತು ಇತರ ಕಡೆಗಳಿಂದ ಕೋಳಿ ಮತ್ತು ನಗರದ ಹೋಟೆಲ್ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ ತಂದು ಸುಡಲಾಗುತ್ತಿದೆ. ಅರ್ಕಾವತಿ ನದಿ ಪಾತ್ರದ ದೊಡ್ಡತುಮಕೂರು ಕೆರೆಗೆ ಶೆಡ್ನ ಕೊಳಚೆ ನೀರು ಬಿಡಲಾಗುತ್ತಿದೆ. ಅಕ್ರಮ ಹಂದಿ ಸಾಕಣೆ ಶೆಡ್ ಸ್ಥಳಾಂತರ ಹಾಗೂ ಕೆರೆ ಅಂಗಳಕ್ಕೆ ಕಲುಷಿತ ನೀರು ಸೇರುತ್ತಿದೆ. ಈ ಕುರಿತು ಈಗಾಗಲೇ ಹೋರಾಟ ನಡೆಯುತ್ತಿದ್ದು, ಗ್ರಾಪಂಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಿಲ್ಲವಾಗಿದೆ. ಆದ್ದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಶೆಡ್ ಸ್ಥಳಾಂತರ ಮಾಡುವಂತೆ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…