Categories: ಕೋಲಾರ

ಬೈರೇಗೌಡರ ಹಾದಿಯಲ್ಲಿ ಕ್ಷೇತ್ರದ ಅಭಿವೃದ್ಧಿ, ವಿರೋಧಿಗಳಿಗೆ ಇದೇ ಉತ್ತರ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ದಿವಂಗತ ಸಿ.ಬೈರೇಗೌಡರ ಹಾದಿಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವುದು ನಮ್ಮ ಗುರಿಯಾಗಿದೆ ವಿರೋಧಿಗಳಿಗೆ ಅಭಿವೃದ್ಧಿಯೇ ಉತ್ತರವಾಗಲಿದೆ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು

ತಾಲೂಕಿನ ಕಾಮಾಂಡಹಳ್ಳಿ ಕೆರೆಯ 3 ಕೋಟಿ, ಪರ್ಜೇನಹಳ್ಳಿ ಕೆರೆಯ 2.5 ಕೋಟಿ ಹಾಗೂ ಕುರ್ಕಿ ಕೆರೆಯ 4 ಕೋಟಿ ಸೇರಿದಂತೆ ಒಟ್ಟು 9.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ಮುಖ್ಯ ಉದ್ದೇಶವೇ ಅಭಿವೃದ್ಧಿಯಾಗಿದೆ ಕ್ಷೇತ್ರದ ಜನರ ದೂರ ದೃಷ್ಟಿ ಇಟ್ಟುಕೊಂಡು ಅಂತರ್ಜಲ ಅಭಿವೃದ್ಧಿ ಮಾಡುವುದು ಹಾಗೂ ಜನರಿಗೆ ಸಮರ್ಪಕವಾಗಿ
ರಸ್ತೆ ಮಾಡಲಾಗುತ್ತದೆ ಅಭಿವೃದ್ಧಿ ಕೆಲಸದಲ್ಲಿ ಹಿಂದೆ ಹೋಗುವುದಿಲ್ಲ ಏನೇ ಅಭಿವೃದ್ಧಿ ಕೆಲಸ ಆಗಬೇಕಾದರೂ ನಮ್ಮ ಗಮನಕ್ಕೆ ತಂದರೆ ಮಾಡಲಾಗುವುದೆಂದು ಆಶ್ವಾಸನೆ ನೀಡಿದರು.

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ತಾಲ್ಲೂಕಿನಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡಿದ್ದು,ಇದೇ ರೀತಿ ಕೋಲಾರ ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲೂ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತದೆ ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲನೆ ನಡೆಸುವ ಜವಾಬ್ದಾರಿ ಗ್ರಾಮಸ್ಥರೇ ವಹಿಸಬೇಕು ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಎಂಎಲ್ಸಿ ಅನಿಲ್ ಕುಮಾರ್, ಮುಖಂಡರಾದ ಚಂಜಿಮಲೆ ರಮೇಶ್, ಸೀಸಂದ್ರ ಗೋಪಾಲಗೌಡ, ಖಾಜಿಕಲ್ಲಹಳ್ಳಿ ಮುನಿರಾಜು, ನಾಗನಾಳ ಸೋಮಣ್ಣ, ಅಂಕತಟ್ಟಿ ಬಾಬು, ನರಸಾಪುರ ಕೃಷ್ಣಪ್ಪ, ಛತ್ರಕೋಡಿಹಳ್ಳಿ ಮಂಜುನಾಥ್, ಮೈಲಾಂಡಹಳ್ಳಿ ಮುರಳಿ, ಗೋವಿಂದಪ್ಪ, ಉರಟಾಗ್ರಹಾರ ಚೌಡರೆಡ್ಡಿ, ಜಾಲಿ ಬಾನು, ನಾಗೇಶ್, ಸೇರಿದಂತೆ ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

6 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

1 day ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago