ಕೋಲಾರ: ದಿವಂಗತ ಸಿ.ಬೈರೇಗೌಡರ ಹಾದಿಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವುದು ನಮ್ಮ ಗುರಿಯಾಗಿದೆ ವಿರೋಧಿಗಳಿಗೆ ಅಭಿವೃದ್ಧಿಯೇ ಉತ್ತರವಾಗಲಿದೆ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು
ತಾಲೂಕಿನ ಕಾಮಾಂಡಹಳ್ಳಿ ಕೆರೆಯ 3 ಕೋಟಿ, ಪರ್ಜೇನಹಳ್ಳಿ ಕೆರೆಯ 2.5 ಕೋಟಿ ಹಾಗೂ ಕುರ್ಕಿ ಕೆರೆಯ 4 ಕೋಟಿ ಸೇರಿದಂತೆ ಒಟ್ಟು 9.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ಮುಖ್ಯ ಉದ್ದೇಶವೇ ಅಭಿವೃದ್ಧಿಯಾಗಿದೆ ಕ್ಷೇತ್ರದ ಜನರ ದೂರ ದೃಷ್ಟಿ ಇಟ್ಟುಕೊಂಡು ಅಂತರ್ಜಲ ಅಭಿವೃದ್ಧಿ ಮಾಡುವುದು ಹಾಗೂ ಜನರಿಗೆ ಸಮರ್ಪಕವಾಗಿ
ರಸ್ತೆ ಮಾಡಲಾಗುತ್ತದೆ ಅಭಿವೃದ್ಧಿ ಕೆಲಸದಲ್ಲಿ ಹಿಂದೆ ಹೋಗುವುದಿಲ್ಲ ಏನೇ ಅಭಿವೃದ್ಧಿ ಕೆಲಸ ಆಗಬೇಕಾದರೂ ನಮ್ಮ ಗಮನಕ್ಕೆ ತಂದರೆ ಮಾಡಲಾಗುವುದೆಂದು ಆಶ್ವಾಸನೆ ನೀಡಿದರು.
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ತಾಲ್ಲೂಕಿನಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡಿದ್ದು,ಇದೇ ರೀತಿ ಕೋಲಾರ ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲೂ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತದೆ ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲನೆ ನಡೆಸುವ ಜವಾಬ್ದಾರಿ ಗ್ರಾಮಸ್ಥರೇ ವಹಿಸಬೇಕು ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಎಂಎಲ್ಸಿ ಅನಿಲ್ ಕುಮಾರ್, ಮುಖಂಡರಾದ ಚಂಜಿಮಲೆ ರಮೇಶ್, ಸೀಸಂದ್ರ ಗೋಪಾಲಗೌಡ, ಖಾಜಿಕಲ್ಲಹಳ್ಳಿ ಮುನಿರಾಜು, ನಾಗನಾಳ ಸೋಮಣ್ಣ, ಅಂಕತಟ್ಟಿ ಬಾಬು, ನರಸಾಪುರ ಕೃಷ್ಣಪ್ಪ, ಛತ್ರಕೋಡಿಹಳ್ಳಿ ಮಂಜುನಾಥ್, ಮೈಲಾಂಡಹಳ್ಳಿ ಮುರಳಿ, ಗೋವಿಂದಪ್ಪ, ಉರಟಾಗ್ರಹಾರ ಚೌಡರೆಡ್ಡಿ, ಜಾಲಿ ಬಾನು, ನಾಗೇಶ್, ಸೇರಿದಂತೆ ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಇದ್ದರು.
ದೊಡ್ಡಬಳ್ಳಾಪುರ: ಅತಿವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಎಲ್ಸಿ ಟಿ.ಎ. ಶರವಣ ಹಾಗೂ ಅವಧೂತ ವಿನಯ್ ಗುರೂಜಿ ಭೇಟಿ ನೀಡಿ…
ಡೇ ಕೇರ್........, ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ...... ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಆರೈಕೆ ಮಾಡುವ ಡೇಕೇರ್ ಎಂಬ ಪರಿಕಲ್ಪನೆಯ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…
ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…
ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…