Categories: ಕೋಲಾರ

ಬೈರೇಗೌಡರ ಹಾದಿಯಲ್ಲಿ ಕ್ಷೇತ್ರದ ಅಭಿವೃದ್ಧಿ, ವಿರೋಧಿಗಳಿಗೆ ಇದೇ ಉತ್ತರ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ದಿವಂಗತ ಸಿ.ಬೈರೇಗೌಡರ ಹಾದಿಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವುದು ನಮ್ಮ ಗುರಿಯಾಗಿದೆ ವಿರೋಧಿಗಳಿಗೆ ಅಭಿವೃದ್ಧಿಯೇ ಉತ್ತರವಾಗಲಿದೆ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು

ತಾಲೂಕಿನ ಕಾಮಾಂಡಹಳ್ಳಿ ಕೆರೆಯ 3 ಕೋಟಿ, ಪರ್ಜೇನಹಳ್ಳಿ ಕೆರೆಯ 2.5 ಕೋಟಿ ಹಾಗೂ ಕುರ್ಕಿ ಕೆರೆಯ 4 ಕೋಟಿ ಸೇರಿದಂತೆ ಒಟ್ಟು 9.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ಮುಖ್ಯ ಉದ್ದೇಶವೇ ಅಭಿವೃದ್ಧಿಯಾಗಿದೆ ಕ್ಷೇತ್ರದ ಜನರ ದೂರ ದೃಷ್ಟಿ ಇಟ್ಟುಕೊಂಡು ಅಂತರ್ಜಲ ಅಭಿವೃದ್ಧಿ ಮಾಡುವುದು ಹಾಗೂ ಜನರಿಗೆ ಸಮರ್ಪಕವಾಗಿ
ರಸ್ತೆ ಮಾಡಲಾಗುತ್ತದೆ ಅಭಿವೃದ್ಧಿ ಕೆಲಸದಲ್ಲಿ ಹಿಂದೆ ಹೋಗುವುದಿಲ್ಲ ಏನೇ ಅಭಿವೃದ್ಧಿ ಕೆಲಸ ಆಗಬೇಕಾದರೂ ನಮ್ಮ ಗಮನಕ್ಕೆ ತಂದರೆ ಮಾಡಲಾಗುವುದೆಂದು ಆಶ್ವಾಸನೆ ನೀಡಿದರು.

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ತಾಲ್ಲೂಕಿನಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡಿದ್ದು,ಇದೇ ರೀತಿ ಕೋಲಾರ ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲೂ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತದೆ ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲನೆ ನಡೆಸುವ ಜವಾಬ್ದಾರಿ ಗ್ರಾಮಸ್ಥರೇ ವಹಿಸಬೇಕು ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಎಂಎಲ್ಸಿ ಅನಿಲ್ ಕುಮಾರ್, ಮುಖಂಡರಾದ ಚಂಜಿಮಲೆ ರಮೇಶ್, ಸೀಸಂದ್ರ ಗೋಪಾಲಗೌಡ, ಖಾಜಿಕಲ್ಲಹಳ್ಳಿ ಮುನಿರಾಜು, ನಾಗನಾಳ ಸೋಮಣ್ಣ, ಅಂಕತಟ್ಟಿ ಬಾಬು, ನರಸಾಪುರ ಕೃಷ್ಣಪ್ಪ, ಛತ್ರಕೋಡಿಹಳ್ಳಿ ಮಂಜುನಾಥ್, ಮೈಲಾಂಡಹಳ್ಳಿ ಮುರಳಿ, ಗೋವಿಂದಪ್ಪ, ಉರಟಾಗ್ರಹಾರ ಚೌಡರೆಡ್ಡಿ, ಜಾಲಿ ಬಾನು, ನಾಗೇಶ್, ಸೇರಿದಂತೆ ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

14 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

15 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

21 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago