Categories: ಕೊಡಗು

ಬೈಲುಕುಪ್ಪೆ ಹನಿಟ್ರ್ಯಾಪ್ ಪ್ರಕರಣ: ತಲೆಮಾರೆಸಿಕೊಂಡಿದ್ದ ಪ್ರಮುಖ ಇಬ್ಬರು ಆರೋಪಿಗಳು ಕೇರಳದಲ್ಲಿ ಬಂಧನ

ಕುಶಾಲನಗರ ಸಮೀಪದ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ “ಹನಿ ಟ್ರ್ಯಾಪ್” ಪ್ರಕಾರಣಕ್ಕೆ ಸಂಬಂಧಿಸಿದಂತೆ ತಲೆಮಾರೆಸಿಕೊಂಡಿದ್ದ ಕೊಡಗಿನ ಯುವಕ ಸೇರಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೊಡಗು ಜಿಲ್ಲೆಯ ನಾಪೋಕ್ಲು ಕುಂಜಿಲ ನಿವಾಸಿ ಸೈಫ್ ಮತ್ತು ಮಂಡ್ಯ ಮೂಲದ ಯುವತಿ ಕವನ ಳನ್ನು ಬಂಧಿಸಲಾಗಿದೆ. ಕಳೆದ ಜೂನ್ ತಿಂಗಳಿನಲ್ಲಿ ಪಿರಿಯಾಪಟ್ಟಣದ ಕಂಪಲಾ ಪುರ ಬಟ್ಟೆ ಅಂಗಡಿ ಮಾಲೀಕ ಒಬ್ಬನನ್ನು ಹನಿ ಟ್ರ್ಯಾಪ್ ಮಾಡಿ ಲಕ್ಷಾಂತರ ಹಣ ವಸೂಲಿ ಮಾಡಿದ ನಂತರ ತಲೆಮಾರೆಸಿಕೊಂಡಿದ್ದ ಆರೋಪಿಗಳನ್ನು ಬೈಲು ಕುಪ್ಪೆ ಪೊಲೀಸ್ ಠಾಣಾ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಸಬ್ ಇನ್ಸ್ಪೆಕ್ಟರ್ ರವಿಕುಮಾರ್ ನೇತೃತ್ವದಲ್ಲಿ ತಂಡ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಕೇರಳದ ಕಣ್ಣೂರು ಬಳಿ ಲಾಡ್ಜ್ ವೊಂದರಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಹುಣಸೂರು ಪೊಲೀಸ್ ಠಾಣೆಯ ಪೇದೆ ಶಿವಣ್ಣ ಮತ್ತು ಮೂರ್ತಿ ಎಂಬುವವರನ್ನು ಈ ಹಿಂದೆ ಬಂಧಿಸಲಾಗಿತ್ತು. ಪ್ರಕರಣದಲ್ಲಿ ಬಟ್ಟೆ ಅಂಗಡಿ ಮಾಲೀಕ ನಿಂದ 10 ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡಲಾಗಿತ್ತು. ಬಂಧಿತರನ್ನು ಮೈಸೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Ramesh Babu

Journalist

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

5 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

6 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

9 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

18 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago