Categories: Home

ಬೋನಿಗೆ ಬಿದ್ದ ಚಿರತೆ; ಹಿರೇಮುದ್ದೇನಹಳ್ಳಿ ಗ್ರಾಮದಲ್ಲಿ ಸೆರೆ ಸಿಕ್ಕಿದ ರಕ್ಕಸ ಚಿರತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಮುದ್ದೇನಹಳ್ಳಿ-ಕಲ್ಲುಕೋಟೆ ಅರಣ್ಯ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ಕಳೆದ ರಾತ್ರಿ ಬೋನಿಗೆ ಬಿದ್ದಿದೆ, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ಇತ್ತೀಚೆಗೆ ಹಸುವಿನ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದ ಚಿರತೆ, ಈ ಹಿನ್ನೆಲೆ ಅರಣ್ಯ ಇಲಾಖೆ ಕಾಡಿನಲ್ಲಿ ಬೋನು ಇರಿಸಲಾಗಿತ್ತು, ಒಂದು ಚಿರತೆ ಬೋನಿಗೆ ಬಂದು‌ ಬಿದ್ದಿದೆ.

ತೂಬಗೆರೆ ಹೋಬಳಿ ವ್ಯಾಪ್ತಿಯ ಹಿರೇಮುದ್ದೇನಹಳ್ಳಿ, ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಎರಡು ಹಸುಗಳನ್ನು ಬಲಿ ಪಡೆದಿದ್ದ ಚಿರತೆ, ಈ ಹಿನ್ನೆಲೆ‌ ಭಾರೀ ಅನಾಹುತ ನಡೆಯುವುದಕ್ಕಿಂತ ಮೊದಲು ಚಿರತೆಯನ್ನ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದರು.

ಹಿರೇಮುದ್ದೇನಹಳ್ಳಿ ಗ್ರಾಮದ ಸುತ್ತಮುತ್ತ ಹಗಲು ವೇಳೆಯಲ್ಲಿಯೇ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿತ್ತು.

ಎರಡು ಮೂರು ದಿನಗಳ ಹಿಂದೆ ಜಾನುವಾರುಗಳ ಮೇಲೆ ದಾಳಿ ಮಾಡಿ ಹಸುವೊಂದನ್ನು ಬಲಿಪಡೆದಾಗಿನಿಂದ ಅರಣ್ಯದಂಚಿನ ಗ್ರಾಮಸ್ಥರು ಭಯಭೀತರಾಗಿದ್ದರು.

ಈಗ ಚಿರತೆ ಸೆರೆಯಿಂದ ಕೊಂಚ ನಿರಾಳವಾಗಿದೆ. ಆದರೂ ನಿತ್ಯ ವನ್ಯಜೀವಿ ಸಂಘರ್ಷದಿಂದ ಬೇಸರವಾಗಿದೆ. ಚಿರತೆ ಹಾವಳಿಯಿಂದ ಶಾಶ್ವತ ಪರಿಹಾರಕ್ಕೆ ಅರಣ್ಯ ಇಲಾಖೆ ಮುಂದಾಗಬೇಕು ಹಾಗೂ ಚಿರತೆ ದಾಳಿಯಿಂದ ಜಾನುವಾರುಗಳನ್ನು ಕಳೆದುಕೊಂಡು ರೈತರಿಗೆ ಸೂಕ್ತ ಪರಿಹಾರ ತ್ವರಿತ ಗತಿಯಲ್ಲಿ ಒದಗಿಸಿಕೊಡಬೇಕು ಎಂದು ತೂಬಗೆರೆ ಗ್ರಾಮಸ್ಥ ಉದಯ ಆರಾಧ್ಯ ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

3 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

7 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

16 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

23 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

24 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago