ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಮುದ್ದೇನಹಳ್ಳಿ-ಕಲ್ಲುಕೋಟೆ ಅರಣ್ಯ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ಕಳೆದ ರಾತ್ರಿ ಬೋನಿಗೆ ಬಿದ್ದಿದೆ, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ತೂಬಗೆರೆ ಹೋಬಳಿ ವ್ಯಾಪ್ತಿಯ ಹಿರೇಮುದ್ದೇನಹಳ್ಳಿ, ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಎರಡು ಹಸುಗಳನ್ನು ಬಲಿ ಪಡೆದಿದ್ದ ಚಿರತೆ, ಈ ಹಿನ್ನೆಲೆ ಭಾರೀ ಅನಾಹುತ ನಡೆಯುವುದಕ್ಕಿಂತ ಮೊದಲು ಚಿರತೆಯನ್ನ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದರು.
ಹಿರೇಮುದ್ದೇನಹಳ್ಳಿ ಗ್ರಾಮದ ಸುತ್ತಮುತ್ತ ಹಗಲು ವೇಳೆಯಲ್ಲಿಯೇ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿತ್ತು.
ಎರಡು ಮೂರು ದಿನಗಳ ಹಿಂದೆ ಜಾನುವಾರುಗಳ ಮೇಲೆ ದಾಳಿ ಮಾಡಿ ಹಸುವೊಂದನ್ನು ಬಲಿಪಡೆದಾಗಿನಿಂದ ಅರಣ್ಯದಂಚಿನ ಗ್ರಾಮಸ್ಥರು ಭಯಭೀತರಾಗಿದ್ದರು.
ಈಗ ಚಿರತೆ ಸೆರೆಯಿಂದ ಕೊಂಚ ನಿರಾಳವಾಗಿದೆ. ಆದರೂ ನಿತ್ಯ ವನ್ಯಜೀವಿ ಸಂಘರ್ಷದಿಂದ ಬೇಸರವಾಗಿದೆ. ಚಿರತೆ ಹಾವಳಿಯಿಂದ ಶಾಶ್ವತ ಪರಿಹಾರಕ್ಕೆ ಅರಣ್ಯ ಇಲಾಖೆ ಮುಂದಾಗಬೇಕು ಹಾಗೂ ಚಿರತೆ ದಾಳಿಯಿಂದ ಜಾನುವಾರುಗಳನ್ನು ಕಳೆದುಕೊಂಡು ರೈತರಿಗೆ ಸೂಕ್ತ ಪರಿಹಾರ ತ್ವರಿತ ಗತಿಯಲ್ಲಿ ಒದಗಿಸಿಕೊಡಬೇಕು ಎಂದು ತೂಬಗೆರೆ ಗ್ರಾಮಸ್ಥ ಉದಯ ಆರಾಧ್ಯ ಆಗ್ರಹಿಸಿದ್ದಾರೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…