ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಮುದ್ದೇನಹಳ್ಳಿ-ಕಲ್ಲುಕೋಟೆ ಅರಣ್ಯ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ಕಳೆದ ರಾತ್ರಿ ಬೋನಿಗೆ ಬಿದ್ದಿದೆ, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ತೂಬಗೆರೆ ಹೋಬಳಿ ವ್ಯಾಪ್ತಿಯ ಹಿರೇಮುದ್ದೇನಹಳ್ಳಿ, ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಎರಡು ಹಸುಗಳನ್ನು ಬಲಿ ಪಡೆದಿದ್ದ ಚಿರತೆ, ಈ ಹಿನ್ನೆಲೆ ಭಾರೀ ಅನಾಹುತ ನಡೆಯುವುದಕ್ಕಿಂತ ಮೊದಲು ಚಿರತೆಯನ್ನ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದರು.
ಹಿರೇಮುದ್ದೇನಹಳ್ಳಿ ಗ್ರಾಮದ ಸುತ್ತಮುತ್ತ ಹಗಲು ವೇಳೆಯಲ್ಲಿಯೇ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿತ್ತು.
ಎರಡು ಮೂರು ದಿನಗಳ ಹಿಂದೆ ಜಾನುವಾರುಗಳ ಮೇಲೆ ದಾಳಿ ಮಾಡಿ ಹಸುವೊಂದನ್ನು ಬಲಿಪಡೆದಾಗಿನಿಂದ ಅರಣ್ಯದಂಚಿನ ಗ್ರಾಮಸ್ಥರು ಭಯಭೀತರಾಗಿದ್ದರು.
ಈಗ ಚಿರತೆ ಸೆರೆಯಿಂದ ಕೊಂಚ ನಿರಾಳವಾಗಿದೆ. ಆದರೂ ನಿತ್ಯ ವನ್ಯಜೀವಿ ಸಂಘರ್ಷದಿಂದ ಬೇಸರವಾಗಿದೆ. ಚಿರತೆ ಹಾವಳಿಯಿಂದ ಶಾಶ್ವತ ಪರಿಹಾರಕ್ಕೆ ಅರಣ್ಯ ಇಲಾಖೆ ಮುಂದಾಗಬೇಕು ಹಾಗೂ ಚಿರತೆ ದಾಳಿಯಿಂದ ಜಾನುವಾರುಗಳನ್ನು ಕಳೆದುಕೊಂಡು ರೈತರಿಗೆ ಸೂಕ್ತ ಪರಿಹಾರ ತ್ವರಿತ ಗತಿಯಲ್ಲಿ ಒದಗಿಸಿಕೊಡಬೇಕು ಎಂದು ತೂಬಗೆರೆ ಗ್ರಾಮಸ್ಥ ಉದಯ ಆರಾಧ್ಯ ಆಗ್ರಹಿಸಿದ್ದಾರೆ.
ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…
. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…
ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…
ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…
ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…