Categories: ಕೋಲಾರ

ಬೋವಿ ಸಮುದಾಯ ಭವನಕ್ಕೆ ಸರಕಾರ, ವೈಯಕ್ತಿಕವಾಗಿ ಅನುದಾನ ನೀಡುವೆ: ಕೊತ್ತೂರು ಮಂಜುನಾಥ್

ಕೋಲಾರ: ಬೋವಿ ಸಮುದಾಯದ ಅಭಿವೃದ್ಧಿಗಾಗಿ ನಿರ್ಮಾಣವಾಗುತ್ತಿರುವ ಸಮುದಾಯ ಭವನಕ್ಕೆ ಸರಕಾರದಿಂದ ಹಾಗೂ ವೈಯಕ್ತಿಕವಾಗಿ ಅನುದಾನ ನೀಡಲು ಸಿದ್ದರಿದ್ದು ಸಮುದಾಯಕ್ಕೆ ಅನುಕೂಲವಾಗುವಂತೆ ಭವನವನ್ನು ನಿರ್ಮಾಣ ಮಾಡಿ ನಾಲ್ಕು ಜನ ನೆನಪಿಸಿಕೊಳ್ಳುವಂತಾಗಬೇಕು ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು

ನಗರ ಹೊರವಲಯದ ಟಮಕ ಬಡಾವಣೆ ಕುಡಾ ಲೇಔಟ್ ನಲ್ಲಿ ಶನಿವಾರ ಸುಮಾರು 4 ಕೋಟಿ ವೆಚ್ಚದ ಭೋವಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಮಾತನಾಡಿದ ಅವರು ಯಾವುದೇ ಸಮಾಜವಾಗಲಿ, ಜಾತಿಯಾಗಲಿ ನಾಲ್ಕು ಜನಕ್ಕೆ ಒಳ್ಳೆಯದು ಮಾಡುವ ಕೆಲಸಕ್ಕೆ ನನ್ನ ಬೆಂಬಲ ಇದ್ದೇ ಇರುತ್ತದೆ ಜನಪ್ರತಿನಿಧಿಗಳಿಗೆ ರಾಜಕೀಯ ಮುಖ್ಯವಲ್ಲ ಎಲ್ಲಾ ಜಾತಿ ಜನಾಂಗಗಳಿಗೆ ಒಳಿತು ಮಾಡುವ ಜವಾಬ್ದಾರಿ ನಮ್ಮದು ಆಗಿರಬೇಕು ಅಷ್ಟೇ ಎಂದು ತಿಳಿಸಿದರು.

ಸಮುದಾಯದ ಜಾಗವನ್ನು ಗುರುತಿಸಿಕೊಳ್ಳಲು ಅನೇಕರ ಶ್ರಮವಿದೆ ಹಿಂದೆ ಗುದ್ದಲಿ ಪೂಜೆಯೂ ಮಾಡಿದ್ದಾರೆ ಆದರೆ ಯಾರೇ ಪೂಜೆ ಮಾಡಲಿ, ಬಿಡಲಿ ಅದು ಉಪಯೋಗಕ್ಕೆ ಬರುವಂತೆ ಕೆಲಸ ಮಾಡಿದಾಗ ಮಾತ್ರವೇ ಜನ ನೆನಪಿಸಿಕೊಳ್ಳುತ್ತಾರೆ ಮುಂದಿನ ಒಂದು ವರ್ಷದಲ್ಲಿ ಕಟ್ಟಡವನ್ನು ಪೂರ್ಣಗೊಳಿಸಿ ಬೋವಿ ಸಮುದಾಯದ ಚಟುವಟಿಕೆಗಳಿಗೆ ಅನುವು ಮಾಡಿಕೊಡುವಂತೆ ಗುತ್ತಿಗೆದಾರನಿಗೆ ತಿಳಿಸಿ ಸಮುದಾಯದ ಮುಖಂಡರು ಒಗ್ಗಟ್ಟಿನಿಂದ ಆಗಿಂದಾಗ್ಗೆ ಬಂದು ಕಾಮಗಾರಿಯನ್ನು ಪರಿಶೀಲನೆ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್  ಕುಮಾರ್ ಮಾತನಾಡಿ ರಾಜ್ಯ ಸರಕಾರವು ಪ್ರತಿಯೊಂದು ಸಮುದಾಯಗಳು ತಮ್ಮ  ಚಟುವಟಿಕೆಗಳನ್ನು ನಡೆಸಲು ಸಮುದಾಯ ಭವನಗಳ ನಿರ್ಮಾಣ ಮಾಡಲು ಉದ್ದೇಶಿಸಿದೆ ಈ ಸಮುದಾಯ ಭವನ ನಿರ್ಮಾಣಕ್ಕೆ ಹಣದ ಕೊರತೆ ಆದರೆ ಎಂಎಲ್ಸಿ ಹಾಗೂ ಮತ್ತು ಶಾಸಕರ ಅನುದಾನದಲ್ಲಿ ಅಗತ್ಯ ಹಣ ಬಿಡುಗಡೆ ಮಾಡಿಕೊಡುವ ಆಶ್ವಾಸನೆ ನೀಡಿದರು ಜಾಗದ ಕೊರತೆ ಹಾಗೂ ಭೂಮಿ ಕಡಿಮೆ ಕೊಟ್ಟಿರುವ ಬಗ್ಗೆ ವಿಚಾರ ಮಾಡಿ ಲಭ್ಯತೆ ಇದ್ದರೆ ಮತ್ತಷ್ಟು ಜಾಗವನ್ನು ಕೊಡಿಸಿ ಕೊಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ  ಹಾಗೂ ಭೋವಿ ಜನಾಂಗದ ಜಿಲ್ಲಾ ಅಧ್ಯಕ್ಷೆ ಮಂಗಮ್ಮ ಮುನಿಸ್ವಾಮಿ ಮಾತನಾಡಿ ಸಮುದಾಯದ ಅಭಿವೃದ್ಧಿಗಾಗಿ ಸರಕಾರವು ಒಂದು ಕೋಟಿ ಜಾಗಕ್ಕೆ ನಾಲ್ಕು ಕೋಟಿ ಸಮುದಾಯ ಭವನಕ್ಕೆ ನೀಡಿದ್ದಾರೆ ಮುಂದೆ ಸಮುದಾಯದ ಮಕ್ಕಳ ಶೈಕ್ಷಣಿಕವಾಗಿ ಬೆಳೆಯಲು ಶಾಲೆ ಹಾಗೂ ಹಾಸ್ಟೆಲ್ ಅವಶ್ಯಕತೆ ಇದ್ದು ಕನಿಷ್ಠ 20 ಕುಂಟೆ ಜಾಗವನ್ನು ಸರಕಾರ ಮಂಜೂರು ಮಾಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಭೋವಿ ಜನಾಂಗದ ಜಿಲ್ಲಾ ಉಪಾಧ್ಯಕ್ಷ ಸಿ.ವಿ ಗೋಪಾಲ್, ನಗರಸಭೆ ಸದಸ್ಯರಾದ ಅಂಬರೀಷ್, ನಾಗರಾಜ್, ಕೋಚಿಮುಲ್ ಮಾಜಿ ನಿರ್ದೇಶಕ ಛತ್ರಕೋಡಿಹಳ್ಳಿ ರಾಮಕೃಷ್ಣೇಗೌಡ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ವಕ್ಕಲೇರಿ ರಾಜಪ್ಪ, ಮೈಲಾಂಡಹಳ್ಳಿ ಮುರಳಿ, ಬೋವಿ ಸಮುದಾಯದ ಮುಖಂಡರಾದ ವರದೇನಹಳ್ಳಿ ವೆಂಕಟೇಶ್, ಹರಿಪ್ರಸಾದ್, ಮಾಲೂರು ಎಸ್.ವಿ.ಲೋಕೇಶ್, ಎಲ್.ಜಿ ಮುನಿರಾಜು, ಪಾಪಣ್ಣ, ಕೂಟೇರಿ ಚರಣ್, ಗುತ್ತಿಗೆದಾರ ರಾಜಣ್ಣ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

16 minutes ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

28 minutes ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 hour ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

2 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

5 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

5 hours ago