Categories: ಕೋಲಾರ

ಬೋವಿ ಸಮುದಾಯ ಭವನಕ್ಕೆ ಸರಕಾರ, ವೈಯಕ್ತಿಕವಾಗಿ ಅನುದಾನ ನೀಡುವೆ: ಕೊತ್ತೂರು ಮಂಜುನಾಥ್

ಕೋಲಾರ: ಬೋವಿ ಸಮುದಾಯದ ಅಭಿವೃದ್ಧಿಗಾಗಿ ನಿರ್ಮಾಣವಾಗುತ್ತಿರುವ ಸಮುದಾಯ ಭವನಕ್ಕೆ ಸರಕಾರದಿಂದ ಹಾಗೂ ವೈಯಕ್ತಿಕವಾಗಿ ಅನುದಾನ ನೀಡಲು ಸಿದ್ದರಿದ್ದು ಸಮುದಾಯಕ್ಕೆ ಅನುಕೂಲವಾಗುವಂತೆ ಭವನವನ್ನು ನಿರ್ಮಾಣ ಮಾಡಿ ನಾಲ್ಕು ಜನ ನೆನಪಿಸಿಕೊಳ್ಳುವಂತಾಗಬೇಕು ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು

ನಗರ ಹೊರವಲಯದ ಟಮಕ ಬಡಾವಣೆ ಕುಡಾ ಲೇಔಟ್ ನಲ್ಲಿ ಶನಿವಾರ ಸುಮಾರು 4 ಕೋಟಿ ವೆಚ್ಚದ ಭೋವಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಮಾತನಾಡಿದ ಅವರು ಯಾವುದೇ ಸಮಾಜವಾಗಲಿ, ಜಾತಿಯಾಗಲಿ ನಾಲ್ಕು ಜನಕ್ಕೆ ಒಳ್ಳೆಯದು ಮಾಡುವ ಕೆಲಸಕ್ಕೆ ನನ್ನ ಬೆಂಬಲ ಇದ್ದೇ ಇರುತ್ತದೆ ಜನಪ್ರತಿನಿಧಿಗಳಿಗೆ ರಾಜಕೀಯ ಮುಖ್ಯವಲ್ಲ ಎಲ್ಲಾ ಜಾತಿ ಜನಾಂಗಗಳಿಗೆ ಒಳಿತು ಮಾಡುವ ಜವಾಬ್ದಾರಿ ನಮ್ಮದು ಆಗಿರಬೇಕು ಅಷ್ಟೇ ಎಂದು ತಿಳಿಸಿದರು.

ಸಮುದಾಯದ ಜಾಗವನ್ನು ಗುರುತಿಸಿಕೊಳ್ಳಲು ಅನೇಕರ ಶ್ರಮವಿದೆ ಹಿಂದೆ ಗುದ್ದಲಿ ಪೂಜೆಯೂ ಮಾಡಿದ್ದಾರೆ ಆದರೆ ಯಾರೇ ಪೂಜೆ ಮಾಡಲಿ, ಬಿಡಲಿ ಅದು ಉಪಯೋಗಕ್ಕೆ ಬರುವಂತೆ ಕೆಲಸ ಮಾಡಿದಾಗ ಮಾತ್ರವೇ ಜನ ನೆನಪಿಸಿಕೊಳ್ಳುತ್ತಾರೆ ಮುಂದಿನ ಒಂದು ವರ್ಷದಲ್ಲಿ ಕಟ್ಟಡವನ್ನು ಪೂರ್ಣಗೊಳಿಸಿ ಬೋವಿ ಸಮುದಾಯದ ಚಟುವಟಿಕೆಗಳಿಗೆ ಅನುವು ಮಾಡಿಕೊಡುವಂತೆ ಗುತ್ತಿಗೆದಾರನಿಗೆ ತಿಳಿಸಿ ಸಮುದಾಯದ ಮುಖಂಡರು ಒಗ್ಗಟ್ಟಿನಿಂದ ಆಗಿಂದಾಗ್ಗೆ ಬಂದು ಕಾಮಗಾರಿಯನ್ನು ಪರಿಶೀಲನೆ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್  ಕುಮಾರ್ ಮಾತನಾಡಿ ರಾಜ್ಯ ಸರಕಾರವು ಪ್ರತಿಯೊಂದು ಸಮುದಾಯಗಳು ತಮ್ಮ  ಚಟುವಟಿಕೆಗಳನ್ನು ನಡೆಸಲು ಸಮುದಾಯ ಭವನಗಳ ನಿರ್ಮಾಣ ಮಾಡಲು ಉದ್ದೇಶಿಸಿದೆ ಈ ಸಮುದಾಯ ಭವನ ನಿರ್ಮಾಣಕ್ಕೆ ಹಣದ ಕೊರತೆ ಆದರೆ ಎಂಎಲ್ಸಿ ಹಾಗೂ ಮತ್ತು ಶಾಸಕರ ಅನುದಾನದಲ್ಲಿ ಅಗತ್ಯ ಹಣ ಬಿಡುಗಡೆ ಮಾಡಿಕೊಡುವ ಆಶ್ವಾಸನೆ ನೀಡಿದರು ಜಾಗದ ಕೊರತೆ ಹಾಗೂ ಭೂಮಿ ಕಡಿಮೆ ಕೊಟ್ಟಿರುವ ಬಗ್ಗೆ ವಿಚಾರ ಮಾಡಿ ಲಭ್ಯತೆ ಇದ್ದರೆ ಮತ್ತಷ್ಟು ಜಾಗವನ್ನು ಕೊಡಿಸಿ ಕೊಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ  ಹಾಗೂ ಭೋವಿ ಜನಾಂಗದ ಜಿಲ್ಲಾ ಅಧ್ಯಕ್ಷೆ ಮಂಗಮ್ಮ ಮುನಿಸ್ವಾಮಿ ಮಾತನಾಡಿ ಸಮುದಾಯದ ಅಭಿವೃದ್ಧಿಗಾಗಿ ಸರಕಾರವು ಒಂದು ಕೋಟಿ ಜಾಗಕ್ಕೆ ನಾಲ್ಕು ಕೋಟಿ ಸಮುದಾಯ ಭವನಕ್ಕೆ ನೀಡಿದ್ದಾರೆ ಮುಂದೆ ಸಮುದಾಯದ ಮಕ್ಕಳ ಶೈಕ್ಷಣಿಕವಾಗಿ ಬೆಳೆಯಲು ಶಾಲೆ ಹಾಗೂ ಹಾಸ್ಟೆಲ್ ಅವಶ್ಯಕತೆ ಇದ್ದು ಕನಿಷ್ಠ 20 ಕುಂಟೆ ಜಾಗವನ್ನು ಸರಕಾರ ಮಂಜೂರು ಮಾಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಭೋವಿ ಜನಾಂಗದ ಜಿಲ್ಲಾ ಉಪಾಧ್ಯಕ್ಷ ಸಿ.ವಿ ಗೋಪಾಲ್, ನಗರಸಭೆ ಸದಸ್ಯರಾದ ಅಂಬರೀಷ್, ನಾಗರಾಜ್, ಕೋಚಿಮುಲ್ ಮಾಜಿ ನಿರ್ದೇಶಕ ಛತ್ರಕೋಡಿಹಳ್ಳಿ ರಾಮಕೃಷ್ಣೇಗೌಡ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ವಕ್ಕಲೇರಿ ರಾಜಪ್ಪ, ಮೈಲಾಂಡಹಳ್ಳಿ ಮುರಳಿ, ಬೋವಿ ಸಮುದಾಯದ ಮುಖಂಡರಾದ ವರದೇನಹಳ್ಳಿ ವೆಂಕಟೇಶ್, ಹರಿಪ್ರಸಾದ್, ಮಾಲೂರು ಎಸ್.ವಿ.ಲೋಕೇಶ್, ಎಲ್.ಜಿ ಮುನಿರಾಜು, ಪಾಪಣ್ಣ, ಕೂಟೇರಿ ಚರಣ್, ಗುತ್ತಿಗೆದಾರ ರಾಜಣ್ಣ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

10 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

11 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

15 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

16 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

22 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

23 hours ago