ಬೌದ್ಧ ನೆಲೆಯಾದ ರಾಜಘಟ್ಟದ ಬೂದಿಗುಂಡಿ ಉತ್ಖನನಕ್ಕೆ ಚಾಲನೆ

ರಾಜ್ಯದ ಐತಿಹಾಸಿಕ ಬೌದ್ಧ ನೆಲೆಯಾದ ರಾಜಘಟ್ಟದ ಬೂದಿಗುಂಡಿ ಉತ್ಖನನಕ್ಕೆ ಇಂದು ಕಾನೂನು ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯಹಾರಗಳು ಮತ್ತು ಪ್ರವಾಸೋದ್ಯಮ ಸಚಿವರಾದ ಡಾ.ಎಚ್.ಕೆ ಪಾಟೀಲ್ ಅವರು ಚಾಲನೆ ನೀಡಿದರು.

ರಾಜಘಟ್ಟ ಗ್ರಾಮದಲ್ಲಿ ಸುಮಾರು 1500 ವರ್ಷಗಳ ಹಿಂದೆ ಪ್ರಾಚೀನ ಮಹಾಯಾನ ಬೌದ್ಧ ವಿಹಾರ ಮತ್ತು ಚೈತ್ಯದ ಅವಶೇಷಗಳು ಪತ್ತೆಯಾಗಿದ್ದು, ಇದು ರಾಜ್ಯದಲ್ಲಿ ಮಹಾಯಾನ ಬೌದ್ಧಧರ್ಮಕ್ಕೆ ಸಂಬಂಧಿಸಿದ ರಚನೆಗಳ ಮೊದಲ ಪುರಾತತ್ತ್ವ ಶಾಸ್ತ್ರದ ಆವಿಷ್ಕಾರವಾಗಿದೆ.

ಈ ಸ್ಥಳವನ್ನು 2001 ಮತ್ತು 2004 ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಪುರಾತತ್ವ ವಿಭಾಗದ ಪ್ರೊ. ಎಂ.ಎಸ್. ಕೃಷ್ಣಮೂರ್ತಿ (ನಿವೃತ್ತ) ಕಂಡುಹಿಡಿದು ಉತ್ಖನನ ಮಾಡಿದರು. ಆದರೆ, ಈ ಉತ್ಖನನ ಪರಿಪೂರ್ಣವಾಗಿರಲಿಲ್ಲ ಎನ್ನಲಾಗಿದೆ.

ತಮಿಳುನಾಡಿನ ಪ್ರಮುಖ ಕಲಿಕಾ ಕೇಂದ್ರವಾದ ಕಾಂಚಿ ಮತ್ತು ಕೇರಳದ ಶ್ರೀಮೂಲವಾಸಂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಪ್ರಾಚೀನ ಮಹಾಯಾನ ಬೌದ್ಧ ಮಠಗಳ ಬಗ್ಗೆ ವರದಿಗಳಿವೆ. ಆದಾಗ್ಯೂ, ಆಂಧ್ರಪ್ರದೇಶ, ತೆಲಂಗಾಣದ ನಾಗಾರ್ಜುನಕೊಂಡದ ದಕ್ಷಿಣಕ್ಕೆ ಎಲ್ಲಿಯೂ ಮಹಾಯಾನ ಬೌದ್ಧ ವಿಹಾರಗಳು ಮತ್ತು ಅವಶೇಷಗಳ ಬಗ್ಗೆ ರಚನಾತ್ಮಕ ಉತ್ಖನನ ನಡೆದಿಲ್ಲ. ಹಾಗಾಗಿ ರಾಜಘಟ್ಟದಲ್ಲಿನ ಚೈತ್ಯದ ಅವಶೇಷಗಳ ಆವಿಷ್ಕಾರವು ಹೆಚ್ಚಿನ ಮಹತ್ವದ್ದಾಗಿದೆ.

ಇದು ಬೆಂಗಳೂರಿನಲ್ಲಿ ಮಹಾಯಾನ ಬೌದ್ಧಧರ್ಮದ ಉಪಸ್ಥಿತಿಯ ಮೇಲೆ ಬೆಳಕು ಚೆಲ್ಲುವುದಲ್ಲದೆ, ಕರ್ನಾಟಕ ಮತ್ತು ದಕ್ಷಿಣ ಭಾರತದ ಉಳಿದ ಭಾಗಗಳಲ್ಲಿ ಮೊದಲ ಸಹಸ್ರಮಾನದ ಅವಧಿಯಲ್ಲಿ ಬೌದ್ಧ ಪದ್ಧತಿಗಳು ಮತ್ತು ಜೀವನದ ಬಗ್ಗೆ ಅಮೂಲ್ಯವಾದ ಮಾಹಿತಿಯನ್ನು ಒದಗಿಸುತ್ತದೆ.

ರಾಜಘಟ್ಟ ಎಂಬುದು ದೆಹಲಿಯ ರಾಜ್‌ ಘಾಟ್ ನಿಂದ ವಲಸೆ ಬಂದ ಬೌದ್ಧರ ನೆಲೆಯಾಗಿತ್ತು ಎಂಬುದು ಬೌದ್ಧ ಅನುಯಾಯಿಗಳ ವಾದವಾಗಿದೆ. ರಾಜಘಟ್ಟ ಗ್ರಾಮವು 2ನೇ ಶತಮಾನದಿಂದ 7ನೇ ಶತಮಾನದವರೆಗೆ ಬೌದ್ಧ ವಸಾಹತು ಪ್ರದೇಶವಾದ್ದು, ಬೌದ್ಧರ ಪ್ರಮುಖ ವಾಣಿಜ್ಯ ಕೇಂದ್ರವಾಗಿತ್ತು ಎಂಬ ಮಾತುಗಳು ಕೇಳಿಬಂದಿವೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟ ಗ್ರಾಮವು ಕ್ರಿಸ್ತ ಪೂರ್ವದಲ್ಲಿ ಬೌದ್ಧರ ಪ್ರಮುಖ ವ್ಯಾಪಾರಿ ಕೇಂದ್ರವಾಗಿತ್ತು. ಈ ಗ್ರಾಮದ ಸುಮಾರು 40 ಎಕರೆಗೂ ಹೆಚ್ಚು ವಿಸ್ತೀರ್ಣದಲ್ಲಿ ಬೌದ್ಧ ಪಳೆಯುಳಿಕೆಗಳು ಹುದುಗಿವೆ ಎನ್ನಲಾಗಿದೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 hour ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

2 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

3 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

4 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

11 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago