ಬೌದ್ಧ ನೆಲೆಯಾದ ರಾಜಘಟ್ಟದ ಬೂದಿಗುಂಡಿ ಉತ್ಖನನಕ್ಕೆ ಚಾಲನೆ

ರಾಜ್ಯದ ಐತಿಹಾಸಿಕ ಬೌದ್ಧ ನೆಲೆಯಾದ ರಾಜಘಟ್ಟದ ಬೂದಿಗುಂಡಿ ಉತ್ಖನನಕ್ಕೆ ಇಂದು ಕಾನೂನು ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯಹಾರಗಳು ಮತ್ತು ಪ್ರವಾಸೋದ್ಯಮ ಸಚಿವರಾದ ಡಾ.ಎಚ್.ಕೆ ಪಾಟೀಲ್ ಅವರು ಚಾಲನೆ ನೀಡಿದರು.

ರಾಜಘಟ್ಟ ಗ್ರಾಮದಲ್ಲಿ ಸುಮಾರು 1500 ವರ್ಷಗಳ ಹಿಂದೆ ಪ್ರಾಚೀನ ಮಹಾಯಾನ ಬೌದ್ಧ ವಿಹಾರ ಮತ್ತು ಚೈತ್ಯದ ಅವಶೇಷಗಳು ಪತ್ತೆಯಾಗಿದ್ದು, ಇದು ರಾಜ್ಯದಲ್ಲಿ ಮಹಾಯಾನ ಬೌದ್ಧಧರ್ಮಕ್ಕೆ ಸಂಬಂಧಿಸಿದ ರಚನೆಗಳ ಮೊದಲ ಪುರಾತತ್ತ್ವ ಶಾಸ್ತ್ರದ ಆವಿಷ್ಕಾರವಾಗಿದೆ.

ಈ ಸ್ಥಳವನ್ನು 2001 ಮತ್ತು 2004 ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಪುರಾತತ್ವ ವಿಭಾಗದ ಪ್ರೊ. ಎಂ.ಎಸ್. ಕೃಷ್ಣಮೂರ್ತಿ (ನಿವೃತ್ತ) ಕಂಡುಹಿಡಿದು ಉತ್ಖನನ ಮಾಡಿದರು. ಆದರೆ, ಈ ಉತ್ಖನನ ಪರಿಪೂರ್ಣವಾಗಿರಲಿಲ್ಲ ಎನ್ನಲಾಗಿದೆ.

ತಮಿಳುನಾಡಿನ ಪ್ರಮುಖ ಕಲಿಕಾ ಕೇಂದ್ರವಾದ ಕಾಂಚಿ ಮತ್ತು ಕೇರಳದ ಶ್ರೀಮೂಲವಾಸಂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಪ್ರಾಚೀನ ಮಹಾಯಾನ ಬೌದ್ಧ ಮಠಗಳ ಬಗ್ಗೆ ವರದಿಗಳಿವೆ. ಆದಾಗ್ಯೂ, ಆಂಧ್ರಪ್ರದೇಶ, ತೆಲಂಗಾಣದ ನಾಗಾರ್ಜುನಕೊಂಡದ ದಕ್ಷಿಣಕ್ಕೆ ಎಲ್ಲಿಯೂ ಮಹಾಯಾನ ಬೌದ್ಧ ವಿಹಾರಗಳು ಮತ್ತು ಅವಶೇಷಗಳ ಬಗ್ಗೆ ರಚನಾತ್ಮಕ ಉತ್ಖನನ ನಡೆದಿಲ್ಲ. ಹಾಗಾಗಿ ರಾಜಘಟ್ಟದಲ್ಲಿನ ಚೈತ್ಯದ ಅವಶೇಷಗಳ ಆವಿಷ್ಕಾರವು ಹೆಚ್ಚಿನ ಮಹತ್ವದ್ದಾಗಿದೆ.

ಇದು ಬೆಂಗಳೂರಿನಲ್ಲಿ ಮಹಾಯಾನ ಬೌದ್ಧಧರ್ಮದ ಉಪಸ್ಥಿತಿಯ ಮೇಲೆ ಬೆಳಕು ಚೆಲ್ಲುವುದಲ್ಲದೆ, ಕರ್ನಾಟಕ ಮತ್ತು ದಕ್ಷಿಣ ಭಾರತದ ಉಳಿದ ಭಾಗಗಳಲ್ಲಿ ಮೊದಲ ಸಹಸ್ರಮಾನದ ಅವಧಿಯಲ್ಲಿ ಬೌದ್ಧ ಪದ್ಧತಿಗಳು ಮತ್ತು ಜೀವನದ ಬಗ್ಗೆ ಅಮೂಲ್ಯವಾದ ಮಾಹಿತಿಯನ್ನು ಒದಗಿಸುತ್ತದೆ.

ರಾಜಘಟ್ಟ ಎಂಬುದು ದೆಹಲಿಯ ರಾಜ್‌ ಘಾಟ್ ನಿಂದ ವಲಸೆ ಬಂದ ಬೌದ್ಧರ ನೆಲೆಯಾಗಿತ್ತು ಎಂಬುದು ಬೌದ್ಧ ಅನುಯಾಯಿಗಳ ವಾದವಾಗಿದೆ. ರಾಜಘಟ್ಟ ಗ್ರಾಮವು 2ನೇ ಶತಮಾನದಿಂದ 7ನೇ ಶತಮಾನದವರೆಗೆ ಬೌದ್ಧ ವಸಾಹತು ಪ್ರದೇಶವಾದ್ದು, ಬೌದ್ಧರ ಪ್ರಮುಖ ವಾಣಿಜ್ಯ ಕೇಂದ್ರವಾಗಿತ್ತು ಎಂಬ ಮಾತುಗಳು ಕೇಳಿಬಂದಿವೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟ ಗ್ರಾಮವು ಕ್ರಿಸ್ತ ಪೂರ್ವದಲ್ಲಿ ಬೌದ್ಧರ ಪ್ರಮುಖ ವ್ಯಾಪಾರಿ ಕೇಂದ್ರವಾಗಿತ್ತು. ಈ ಗ್ರಾಮದ ಸುಮಾರು 40 ಎಕರೆಗೂ ಹೆಚ್ಚು ವಿಸ್ತೀರ್ಣದಲ್ಲಿ ಬೌದ್ಧ ಪಳೆಯುಳಿಕೆಗಳು ಹುದುಗಿವೆ ಎನ್ನಲಾಗಿದೆ.

Ramesh Babu

Journalist

Recent Posts

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

28 minutes ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

5 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

9 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

10 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

11 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

21 hours ago