ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಬಂಧಪಟ್ಟ ಇಂಜಿನಿಯರ್‌ ಅವರನ್ನು ಅಮಾನತುಗೊಳಿಸಿ, ನೋಟಿಸ್‌ ಜಾರಿ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಏ.29ರಂದು ಸುರಿದ ಭಾರಿ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು, ಏಳು ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇಂದು ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರುಗಳ ಸಭೆಯಲ್ಲಿ ಅವರು ಭಾಗವಹಿಸಿ ಅವರು ಮಾತನಾಡಿದರು.

ಗೋಡೆಗೆ ಹಾನಿಯಾಗುವಂತೆ ಮಣ್ಣು ಸುರಿದದ್ದನ್ನು ಆಸ್ಪತ್ರೆ ಮುಖ್ಯಸ್ಥರು ಏಕೆ ಗಮನಿಸಿಲ್ಲ. ಇದು ಮೇಲ್ನೋಟಕ್ಕೆ ಕರ್ತವ್ಯಲೋಪದಂತೆ ಕಾಣುತ್ತಿದ್ದು, ಈ ಸಂಬಂಧ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಬೇಕು.

ಬೆಂಗಳೂರಿನಲ್ಲಿ ಗುಂಡಿಗಳನ್ನು ಮುಚ್ಚಲು ಕೂಡಲೇ  ಕ್ರಮ ಕೈಗೊಳ್ಳಬೇಕು ಎಂದರು.

ನಿನ್ನೆ ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಸಾಕಷ್ಟು ಹಾನಿಯಾಗಿದ್ದು, 250 ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಏಳು ಜನ ಸಾವನ್ನಪ್ಪಿದ್ದಾರೆ. ಈಗಾಗಲೇ ಸತ್ತವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದೇನೆ ಎಂದರು.

ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಬೆಂಗಳೂರಿನ ಐದೂ ವಲಯಗಳ ಆಯುಕ್ತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಒಣಗಿರುವ ಅಪಾಯಕಾರಿ ಮರಗಳ ರೆಂಬೆಗಳನ್ನು ಈಗಲೇ ಕತ್ತರಿಸಬೇಕು ಎಂದು ಸೂಚಿಸಿದರು.

ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು ರಾಜಕಾಲುವೆಗಳಲ್ಲಿ ಹೂಳು ತೆಗೆದು, ಪ್ರವಾಹ ಉಂಟಾಗದಂತೆ ಕ್ರಮ ತೆಗೆದುಕೊಳ್ಳಬೇಕು. ಮಳೆಯಿಂದ ರಸ್ತೆಯಲ್ಲಿ ಬಿದ್ದಿರುವ ಕಸ, ರೆಂಬೆಗಳನ್ನು ಕೂಡಲೇ ತೆರವು ಮಾಡಬೇಕು ಎಂದರು.

ಅಂಡರ್ ಪಾಸ್ ಗಳಲ್ಲಿ ಮಳೆ ನೀರು ನಿಲ್ಲದಂತೆ ಹಾಗೂ ನೀರು ನಿಂತ ಅಂಡರ್ ಪಾಸ್‌ಗಳನ್ನು ಜನ ಬಳಸದಂತೆ ಕೂಡಲೇ ಬ್ಯಾರಿಕೇಡ್ ಹಾಕಬೇಕು ಎಂದು ಹೇಳಿದರು.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕರಾದ ರಿಜ್ವಾನ್ ಅರ್ಷದ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ|| ಶಾಲಿನಿ ರಜನೀಶ್, ಜಿಬಿಎ ಆಯುಕ್ತರಾದ ಮಹೇಶ್ವರ ರಾವ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್‌ರವರು ಸೇರಿದಂತೆ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

10 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

17 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

18 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago