ಚೆನ್ನೈ: ಆಸ್ಟ್ರೇಲಿಯಾ ಹಾಗೂ ಭಾರತ ತಂಡದ ಸರಣಿಯ ಕೊನೆಯ ಹಾಗೂ ನಿರ್ಣಾಯಕ ಪಂದ್ಯದಲ್ಲಿ 21 ರನ್ಗಳ ಭರ್ಜರಿ ಜಯಗಳಿಸುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಂಡಿತು.
ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಉತ್ತಮ ಆರಂಭ ಪಡೆಯಿತು, ಮೊದಲ ವಿಕೆಟ್ ನಷ್ಟಕ್ಕೆ 68 ರನ್ ಗಳ ಭರ್ಜರಿ ಆರಂಭ ಪಡೆದ ಆಸ್ಟ್ರೇಲಿಯ ಹೆಡ್(33) ಹಾಗೂ ಮಿಚೆಲ್ ಮಾಷ್ (47) ರನ್ ಗಳಿಸಿದರು, ಭಾರತ ತಂಡಕ್ಕೆ ಉತ್ತಮ ಬ್ರೇಕ್ ಥ್ರೋ ಕೊಟ್ಟ ಹಾರ್ದಿಕ್ ಪಾಂಡ್ಯ ಮೊದಲ ಎರಡು ವಿಕೆಟ್ ಪಡೆದರು ನಂತರ ಬಂದ ನಾಯಕ ಸ್ಟೀವನ್ ಸ್ಮಿತ್ ಅವರನ್ನು ಬಲಿ ಪಡೆದರು.
ನಂತರ ವಾರ್ನರ್, ಲಬುಷನಿಗೆ, ಹಾಗೂ ಅಲೆಕ್ಸ್ ಹ್ಯಾರಿ, ಸ್ಟೋನಿಸ್ ಹಾಗೂ ಅಬ್ಬಾಟ್ ಉಪಯುಕ್ತ ಕಾಣಿಕೆ ನೀಡಿದರು, ಇದರ ಅನುಕೂಲದಿಂದಾಗಿ 269 ರನ್ ಗಳಿಸಿದರು, ಭಾರತದ ಪರವಾಗಿ ಕುಲದೀಪ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಮೂರು ವಿಕೆಟ್ ಪಡೆದು ಗಮನ ಸೆಳೆದರು.
ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಹಾರ್ದಿಕ್ ಪಾಂಡ್ಯ (40) ಹಾಗೂ ಕೆ. ಎಲ್. ರಾಹುಲ್ (32) ರನ್ ಗಳಿಸಿದರೂ ನಂತರ ದಿಢೀರ್ ಕುಸಿತ ಕಂಡ ಹಿನ್ನೆಲೆಯಲ್ಲಿ 248 ರನ್ ಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡರು.
ಆಸ್ಟ್ರೇಲಿಯಾ ಪರವಾಗಿ ಆಡಂ ಜಂಪಾ 4 ವಿಕೆಟ್ ಹಾಗೂ ಆಗರ್ 2 ವಿಕೆಟ್ ಪಡೆದರು, ಸರಣಿಯಲ್ಲಿ ಉತ್ತಮವಾಗಿ ಬೌಲಿಂಗ್ ಮಾಡಿ ಮಿಂಚಿದ ಮಿಚೆಲ್ ಸ್ಟಾಕ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರೆ ಆಡಂ ಜಂಪಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…