ಚೆನ್ನೈ: ಆಸ್ಟ್ರೇಲಿಯಾ ಹಾಗೂ ಭಾರತ ತಂಡದ ಸರಣಿಯ ಕೊನೆಯ ಹಾಗೂ ನಿರ್ಣಾಯಕ ಪಂದ್ಯದಲ್ಲಿ 21 ರನ್ಗಳ ಭರ್ಜರಿ ಜಯಗಳಿಸುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಂಡಿತು.
ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಉತ್ತಮ ಆರಂಭ ಪಡೆಯಿತು, ಮೊದಲ ವಿಕೆಟ್ ನಷ್ಟಕ್ಕೆ 68 ರನ್ ಗಳ ಭರ್ಜರಿ ಆರಂಭ ಪಡೆದ ಆಸ್ಟ್ರೇಲಿಯ ಹೆಡ್(33) ಹಾಗೂ ಮಿಚೆಲ್ ಮಾಷ್ (47) ರನ್ ಗಳಿಸಿದರು, ಭಾರತ ತಂಡಕ್ಕೆ ಉತ್ತಮ ಬ್ರೇಕ್ ಥ್ರೋ ಕೊಟ್ಟ ಹಾರ್ದಿಕ್ ಪಾಂಡ್ಯ ಮೊದಲ ಎರಡು ವಿಕೆಟ್ ಪಡೆದರು ನಂತರ ಬಂದ ನಾಯಕ ಸ್ಟೀವನ್ ಸ್ಮಿತ್ ಅವರನ್ನು ಬಲಿ ಪಡೆದರು.
ನಂತರ ವಾರ್ನರ್, ಲಬುಷನಿಗೆ, ಹಾಗೂ ಅಲೆಕ್ಸ್ ಹ್ಯಾರಿ, ಸ್ಟೋನಿಸ್ ಹಾಗೂ ಅಬ್ಬಾಟ್ ಉಪಯುಕ್ತ ಕಾಣಿಕೆ ನೀಡಿದರು, ಇದರ ಅನುಕೂಲದಿಂದಾಗಿ 269 ರನ್ ಗಳಿಸಿದರು, ಭಾರತದ ಪರವಾಗಿ ಕುಲದೀಪ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಮೂರು ವಿಕೆಟ್ ಪಡೆದು ಗಮನ ಸೆಳೆದರು.
ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಹಾರ್ದಿಕ್ ಪಾಂಡ್ಯ (40) ಹಾಗೂ ಕೆ. ಎಲ್. ರಾಹುಲ್ (32) ರನ್ ಗಳಿಸಿದರೂ ನಂತರ ದಿಢೀರ್ ಕುಸಿತ ಕಂಡ ಹಿನ್ನೆಲೆಯಲ್ಲಿ 248 ರನ್ ಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡರು.
ಆಸ್ಟ್ರೇಲಿಯಾ ಪರವಾಗಿ ಆಡಂ ಜಂಪಾ 4 ವಿಕೆಟ್ ಹಾಗೂ ಆಗರ್ 2 ವಿಕೆಟ್ ಪಡೆದರು, ಸರಣಿಯಲ್ಲಿ ಉತ್ತಮವಾಗಿ ಬೌಲಿಂಗ್ ಮಾಡಿ ಮಿಂಚಿದ ಮಿಚೆಲ್ ಸ್ಟಾಕ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರೆ ಆಡಂ ಜಂಪಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…