ಚೆನ್ನೈ: ಆಸ್ಟ್ರೇಲಿಯಾ ಹಾಗೂ ಭಾರತ ತಂಡದ ಸರಣಿಯ ಕೊನೆಯ ಹಾಗೂ ನಿರ್ಣಾಯಕ ಪಂದ್ಯದಲ್ಲಿ 21 ರನ್ಗಳ ಭರ್ಜರಿ ಜಯಗಳಿಸುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಂಡಿತು.
ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಉತ್ತಮ ಆರಂಭ ಪಡೆಯಿತು, ಮೊದಲ ವಿಕೆಟ್ ನಷ್ಟಕ್ಕೆ 68 ರನ್ ಗಳ ಭರ್ಜರಿ ಆರಂಭ ಪಡೆದ ಆಸ್ಟ್ರೇಲಿಯ ಹೆಡ್(33) ಹಾಗೂ ಮಿಚೆಲ್ ಮಾಷ್ (47) ರನ್ ಗಳಿಸಿದರು, ಭಾರತ ತಂಡಕ್ಕೆ ಉತ್ತಮ ಬ್ರೇಕ್ ಥ್ರೋ ಕೊಟ್ಟ ಹಾರ್ದಿಕ್ ಪಾಂಡ್ಯ ಮೊದಲ ಎರಡು ವಿಕೆಟ್ ಪಡೆದರು ನಂತರ ಬಂದ ನಾಯಕ ಸ್ಟೀವನ್ ಸ್ಮಿತ್ ಅವರನ್ನು ಬಲಿ ಪಡೆದರು.
ನಂತರ ವಾರ್ನರ್, ಲಬುಷನಿಗೆ, ಹಾಗೂ ಅಲೆಕ್ಸ್ ಹ್ಯಾರಿ, ಸ್ಟೋನಿಸ್ ಹಾಗೂ ಅಬ್ಬಾಟ್ ಉಪಯುಕ್ತ ಕಾಣಿಕೆ ನೀಡಿದರು, ಇದರ ಅನುಕೂಲದಿಂದಾಗಿ 269 ರನ್ ಗಳಿಸಿದರು, ಭಾರತದ ಪರವಾಗಿ ಕುಲದೀಪ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಮೂರು ವಿಕೆಟ್ ಪಡೆದು ಗಮನ ಸೆಳೆದರು.
ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಹಾರ್ದಿಕ್ ಪಾಂಡ್ಯ (40) ಹಾಗೂ ಕೆ. ಎಲ್. ರಾಹುಲ್ (32) ರನ್ ಗಳಿಸಿದರೂ ನಂತರ ದಿಢೀರ್ ಕುಸಿತ ಕಂಡ ಹಿನ್ನೆಲೆಯಲ್ಲಿ 248 ರನ್ ಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡರು.
ಆಸ್ಟ್ರೇಲಿಯಾ ಪರವಾಗಿ ಆಡಂ ಜಂಪಾ 4 ವಿಕೆಟ್ ಹಾಗೂ ಆಗರ್ 2 ವಿಕೆಟ್ ಪಡೆದರು, ಸರಣಿಯಲ್ಲಿ ಉತ್ತಮವಾಗಿ ಬೌಲಿಂಗ್ ಮಾಡಿ ಮಿಂಚಿದ ಮಿಚೆಲ್ ಸ್ಟಾಕ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರೆ ಆಡಂ ಜಂಪಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…