ಬೌಲಿಂಗ್ ದಾಳಿಗೆ ಕುಸಿದ ಭಾರತ; ಆಸೀಸ್ ಗೆ ಸರಣಿ ಜಯ

ಚೆನ್ನೈ: ಆಸ್ಟ್ರೇಲಿಯಾ ಹಾಗೂ ಭಾರತ ತಂಡದ ಸರಣಿಯ ಕೊನೆಯ ಹಾಗೂ ನಿರ್ಣಾಯಕ ಪಂದ್ಯದಲ್ಲಿ 21 ರನ್‌ಗಳ ಭರ್ಜರಿ ಜಯಗಳಿಸುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಂಡಿತು.

ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಉತ್ತಮ ಆರಂಭ ಪಡೆಯಿತು, ಮೊದಲ ವಿಕೆಟ್ ನಷ್ಟಕ್ಕೆ 68 ರನ್ ಗಳ ಭರ್ಜರಿ ಆರಂಭ ಪಡೆದ ಆಸ್ಟ್ರೇಲಿಯ ಹೆಡ್(33) ಹಾಗೂ ಮಿಚೆಲ್ ಮಾಷ್ (47) ರನ್ ಗಳಿಸಿದರು, ಭಾರತ ತಂಡಕ್ಕೆ ಉತ್ತಮ ಬ್ರೇಕ್ ಥ್ರೋ ಕೊಟ್ಟ ಹಾರ್ದಿಕ್ ಪಾಂಡ್ಯ ಮೊದಲ ಎರಡು ವಿಕೆಟ್ ಪಡೆದರು ನಂತರ ಬಂದ ನಾಯಕ ಸ್ಟೀವನ್ ಸ್ಮಿತ್ ಅವರನ್ನು ಬಲಿ ಪಡೆದರು.

ನಂತರ ವಾರ್ನರ್, ಲಬುಷನಿಗೆ, ಹಾಗೂ ಅಲೆಕ್ಸ್ ಹ್ಯಾರಿ, ಸ್ಟೋನಿಸ್ ಹಾಗೂ ಅಬ್ಬಾಟ್ ಉಪಯುಕ್ತ ಕಾಣಿಕೆ ನೀಡಿದರು, ಇದರ ಅನುಕೂಲದಿಂದಾಗಿ 269 ರನ್ ಗಳಿಸಿದರು, ಭಾರತದ ಪರವಾಗಿ ಕುಲದೀಪ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಮೂರು ವಿಕೆಟ್ ಪಡೆದು ಗಮನ ಸೆಳೆದರು.

270 ರನ್ ಗಳ ಗುರಿ ಬೆನ್ನಟ್ಟಿದ ಭಾರತ ಆರಂಭಿಕ ಜೋಡಿ ಉತ್ತಮ ರನ್ ಗಳಿಸಿ ಭರವಸೆ ಮೂಡಿಸಿದ್ದರು, ರೋಹಿತ್ ಶರ್ಮ (30), ಶುಭ್ ಮನ್ ಗಿಲ್ (37) ರನ್‌ಗಳಿಸಿ ಮೊದಲ ವಿಕೆಟ್ ನಷ್ಟಕ್ಕೆ 65 ರನ್ ಗಳಿಸಿದರು, ನಂತರ ಬಂದ ವಿರಾಟ್ ಕೊಹ್ಲಿ (54)ರನ್ ಗಳಿಸಿ ಭರವಸೆ ಮೂಡಿಸಿದ್ದರು.

ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಗಳಾದ ಹಾರ್ದಿಕ್ ಪಾಂಡ್ಯ (40) ಹಾಗೂ ಕೆ. ಎಲ್. ರಾಹುಲ್ (32) ರನ್ ಗಳಿಸಿದರೂ ನಂತರ ದಿಢೀರ್ ಕುಸಿತ ಕಂಡ ಹಿನ್ನೆಲೆಯಲ್ಲಿ 248 ರನ್ ಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡರು.

ಆಸ್ಟ್ರೇಲಿಯಾ ಪರವಾಗಿ ಆಡಂ ಜಂಪಾ 4 ವಿಕೆಟ್ ಹಾಗೂ ಆಗರ್ 2 ವಿಕೆಟ್ ಪಡೆದರು, ಸರಣಿಯಲ್ಲಿ ಉತ್ತಮವಾಗಿ ಬೌಲಿಂಗ್ ಮಾಡಿ ಮಿಂಚಿದ ಮಿಚೆಲ್ ಸ್ಟಾಕ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರೆ ಆಡಂ ಜಂಪಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

44 minutes ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

8 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

24 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago