ಚೆನ್ನೈ: ಆಸ್ಟ್ರೇಲಿಯಾ ಹಾಗೂ ಭಾರತ ತಂಡದ ಸರಣಿಯ ಕೊನೆಯ ಹಾಗೂ ನಿರ್ಣಾಯಕ ಪಂದ್ಯದಲ್ಲಿ 21 ರನ್ಗಳ ಭರ್ಜರಿ ಜಯಗಳಿಸುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಂಡಿತು.
ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಉತ್ತಮ ಆರಂಭ ಪಡೆಯಿತು, ಮೊದಲ ವಿಕೆಟ್ ನಷ್ಟಕ್ಕೆ 68 ರನ್ ಗಳ ಭರ್ಜರಿ ಆರಂಭ ಪಡೆದ ಆಸ್ಟ್ರೇಲಿಯ ಹೆಡ್(33) ಹಾಗೂ ಮಿಚೆಲ್ ಮಾಷ್ (47) ರನ್ ಗಳಿಸಿದರು, ಭಾರತ ತಂಡಕ್ಕೆ ಉತ್ತಮ ಬ್ರೇಕ್ ಥ್ರೋ ಕೊಟ್ಟ ಹಾರ್ದಿಕ್ ಪಾಂಡ್ಯ ಮೊದಲ ಎರಡು ವಿಕೆಟ್ ಪಡೆದರು ನಂತರ ಬಂದ ನಾಯಕ ಸ್ಟೀವನ್ ಸ್ಮಿತ್ ಅವರನ್ನು ಬಲಿ ಪಡೆದರು.
ನಂತರ ವಾರ್ನರ್, ಲಬುಷನಿಗೆ, ಹಾಗೂ ಅಲೆಕ್ಸ್ ಹ್ಯಾರಿ, ಸ್ಟೋನಿಸ್ ಹಾಗೂ ಅಬ್ಬಾಟ್ ಉಪಯುಕ್ತ ಕಾಣಿಕೆ ನೀಡಿದರು, ಇದರ ಅನುಕೂಲದಿಂದಾಗಿ 269 ರನ್ ಗಳಿಸಿದರು, ಭಾರತದ ಪರವಾಗಿ ಕುಲದೀಪ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಮೂರು ವಿಕೆಟ್ ಪಡೆದು ಗಮನ ಸೆಳೆದರು.
ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಹಾರ್ದಿಕ್ ಪಾಂಡ್ಯ (40) ಹಾಗೂ ಕೆ. ಎಲ್. ರಾಹುಲ್ (32) ರನ್ ಗಳಿಸಿದರೂ ನಂತರ ದಿಢೀರ್ ಕುಸಿತ ಕಂಡ ಹಿನ್ನೆಲೆಯಲ್ಲಿ 248 ರನ್ ಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡರು.
ಆಸ್ಟ್ರೇಲಿಯಾ ಪರವಾಗಿ ಆಡಂ ಜಂಪಾ 4 ವಿಕೆಟ್ ಹಾಗೂ ಆಗರ್ 2 ವಿಕೆಟ್ ಪಡೆದರು, ಸರಣಿಯಲ್ಲಿ ಉತ್ತಮವಾಗಿ ಬೌಲಿಂಗ್ ಮಾಡಿ ಮಿಂಚಿದ ಮಿಚೆಲ್ ಸ್ಟಾಕ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರೆ ಆಡಂ ಜಂಪಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…