ಬೌಲಿಂಗ್ ದಾಳಿಗೆ ಕುಸಿದ ಭಾರತ; ಆಸೀಸ್ ಗೆ ಸರಣಿ ಜಯ

ಚೆನ್ನೈ: ಆಸ್ಟ್ರೇಲಿಯಾ ಹಾಗೂ ಭಾರತ ತಂಡದ ಸರಣಿಯ ಕೊನೆಯ ಹಾಗೂ ನಿರ್ಣಾಯಕ ಪಂದ್ಯದಲ್ಲಿ 21 ರನ್‌ಗಳ ಭರ್ಜರಿ ಜಯಗಳಿಸುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಂಡಿತು.

ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಉತ್ತಮ ಆರಂಭ ಪಡೆಯಿತು, ಮೊದಲ ವಿಕೆಟ್ ನಷ್ಟಕ್ಕೆ 68 ರನ್ ಗಳ ಭರ್ಜರಿ ಆರಂಭ ಪಡೆದ ಆಸ್ಟ್ರೇಲಿಯ ಹೆಡ್(33) ಹಾಗೂ ಮಿಚೆಲ್ ಮಾಷ್ (47) ರನ್ ಗಳಿಸಿದರು, ಭಾರತ ತಂಡಕ್ಕೆ ಉತ್ತಮ ಬ್ರೇಕ್ ಥ್ರೋ ಕೊಟ್ಟ ಹಾರ್ದಿಕ್ ಪಾಂಡ್ಯ ಮೊದಲ ಎರಡು ವಿಕೆಟ್ ಪಡೆದರು ನಂತರ ಬಂದ ನಾಯಕ ಸ್ಟೀವನ್ ಸ್ಮಿತ್ ಅವರನ್ನು ಬಲಿ ಪಡೆದರು.

ನಂತರ ವಾರ್ನರ್, ಲಬುಷನಿಗೆ, ಹಾಗೂ ಅಲೆಕ್ಸ್ ಹ್ಯಾರಿ, ಸ್ಟೋನಿಸ್ ಹಾಗೂ ಅಬ್ಬಾಟ್ ಉಪಯುಕ್ತ ಕಾಣಿಕೆ ನೀಡಿದರು, ಇದರ ಅನುಕೂಲದಿಂದಾಗಿ 269 ರನ್ ಗಳಿಸಿದರು, ಭಾರತದ ಪರವಾಗಿ ಕುಲದೀಪ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಮೂರು ವಿಕೆಟ್ ಪಡೆದು ಗಮನ ಸೆಳೆದರು.

270 ರನ್ ಗಳ ಗುರಿ ಬೆನ್ನಟ್ಟಿದ ಭಾರತ ಆರಂಭಿಕ ಜೋಡಿ ಉತ್ತಮ ರನ್ ಗಳಿಸಿ ಭರವಸೆ ಮೂಡಿಸಿದ್ದರು, ರೋಹಿತ್ ಶರ್ಮ (30), ಶುಭ್ ಮನ್ ಗಿಲ್ (37) ರನ್‌ಗಳಿಸಿ ಮೊದಲ ವಿಕೆಟ್ ನಷ್ಟಕ್ಕೆ 65 ರನ್ ಗಳಿಸಿದರು, ನಂತರ ಬಂದ ವಿರಾಟ್ ಕೊಹ್ಲಿ (54)ರನ್ ಗಳಿಸಿ ಭರವಸೆ ಮೂಡಿಸಿದ್ದರು.

ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಗಳಾದ ಹಾರ್ದಿಕ್ ಪಾಂಡ್ಯ (40) ಹಾಗೂ ಕೆ. ಎಲ್. ರಾಹುಲ್ (32) ರನ್ ಗಳಿಸಿದರೂ ನಂತರ ದಿಢೀರ್ ಕುಸಿತ ಕಂಡ ಹಿನ್ನೆಲೆಯಲ್ಲಿ 248 ರನ್ ಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡರು.

ಆಸ್ಟ್ರೇಲಿಯಾ ಪರವಾಗಿ ಆಡಂ ಜಂಪಾ 4 ವಿಕೆಟ್ ಹಾಗೂ ಆಗರ್ 2 ವಿಕೆಟ್ ಪಡೆದರು, ಸರಣಿಯಲ್ಲಿ ಉತ್ತಮವಾಗಿ ಬೌಲಿಂಗ್ ಮಾಡಿ ಮಿಂಚಿದ ಮಿಚೆಲ್ ಸ್ಟಾಕ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರೆ ಆಡಂ ಜಂಪಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

3 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

14 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

15 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

15 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

17 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

21 hours ago