ಚೆನ್ನೈ: ಆಸ್ಟ್ರೇಲಿಯಾ ಹಾಗೂ ಭಾರತ ತಂಡದ ಸರಣಿಯ ಕೊನೆಯ ಹಾಗೂ ನಿರ್ಣಾಯಕ ಪಂದ್ಯದಲ್ಲಿ 21 ರನ್ಗಳ ಭರ್ಜರಿ ಜಯಗಳಿಸುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಂಡಿತು.
ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಉತ್ತಮ ಆರಂಭ ಪಡೆಯಿತು, ಮೊದಲ ವಿಕೆಟ್ ನಷ್ಟಕ್ಕೆ 68 ರನ್ ಗಳ ಭರ್ಜರಿ ಆರಂಭ ಪಡೆದ ಆಸ್ಟ್ರೇಲಿಯ ಹೆಡ್(33) ಹಾಗೂ ಮಿಚೆಲ್ ಮಾಷ್ (47) ರನ್ ಗಳಿಸಿದರು, ಭಾರತ ತಂಡಕ್ಕೆ ಉತ್ತಮ ಬ್ರೇಕ್ ಥ್ರೋ ಕೊಟ್ಟ ಹಾರ್ದಿಕ್ ಪಾಂಡ್ಯ ಮೊದಲ ಎರಡು ವಿಕೆಟ್ ಪಡೆದರು ನಂತರ ಬಂದ ನಾಯಕ ಸ್ಟೀವನ್ ಸ್ಮಿತ್ ಅವರನ್ನು ಬಲಿ ಪಡೆದರು.
ನಂತರ ವಾರ್ನರ್, ಲಬುಷನಿಗೆ, ಹಾಗೂ ಅಲೆಕ್ಸ್ ಹ್ಯಾರಿ, ಸ್ಟೋನಿಸ್ ಹಾಗೂ ಅಬ್ಬಾಟ್ ಉಪಯುಕ್ತ ಕಾಣಿಕೆ ನೀಡಿದರು, ಇದರ ಅನುಕೂಲದಿಂದಾಗಿ 269 ರನ್ ಗಳಿಸಿದರು, ಭಾರತದ ಪರವಾಗಿ ಕುಲದೀಪ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಮೂರು ವಿಕೆಟ್ ಪಡೆದು ಗಮನ ಸೆಳೆದರು.
ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಹಾರ್ದಿಕ್ ಪಾಂಡ್ಯ (40) ಹಾಗೂ ಕೆ. ಎಲ್. ರಾಹುಲ್ (32) ರನ್ ಗಳಿಸಿದರೂ ನಂತರ ದಿಢೀರ್ ಕುಸಿತ ಕಂಡ ಹಿನ್ನೆಲೆಯಲ್ಲಿ 248 ರನ್ ಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡರು.
ಆಸ್ಟ್ರೇಲಿಯಾ ಪರವಾಗಿ ಆಡಂ ಜಂಪಾ 4 ವಿಕೆಟ್ ಹಾಗೂ ಆಗರ್ 2 ವಿಕೆಟ್ ಪಡೆದರು, ಸರಣಿಯಲ್ಲಿ ಉತ್ತಮವಾಗಿ ಬೌಲಿಂಗ್ ಮಾಡಿ ಮಿಂಚಿದ ಮಿಚೆಲ್ ಸ್ಟಾಕ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರೆ ಆಡಂ ಜಂಪಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…