ಚೆನ್ನೈ: ಆಸ್ಟ್ರೇಲಿಯಾ ಹಾಗೂ ಭಾರತ ತಂಡದ ಸರಣಿಯ ಕೊನೆಯ ಹಾಗೂ ನಿರ್ಣಾಯಕ ಪಂದ್ಯದಲ್ಲಿ 21 ರನ್ಗಳ ಭರ್ಜರಿ ಜಯಗಳಿಸುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಂಡಿತು.
ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಉತ್ತಮ ಆರಂಭ ಪಡೆಯಿತು, ಮೊದಲ ವಿಕೆಟ್ ನಷ್ಟಕ್ಕೆ 68 ರನ್ ಗಳ ಭರ್ಜರಿ ಆರಂಭ ಪಡೆದ ಆಸ್ಟ್ರೇಲಿಯ ಹೆಡ್(33) ಹಾಗೂ ಮಿಚೆಲ್ ಮಾಷ್ (47) ರನ್ ಗಳಿಸಿದರು, ಭಾರತ ತಂಡಕ್ಕೆ ಉತ್ತಮ ಬ್ರೇಕ್ ಥ್ರೋ ಕೊಟ್ಟ ಹಾರ್ದಿಕ್ ಪಾಂಡ್ಯ ಮೊದಲ ಎರಡು ವಿಕೆಟ್ ಪಡೆದರು ನಂತರ ಬಂದ ನಾಯಕ ಸ್ಟೀವನ್ ಸ್ಮಿತ್ ಅವರನ್ನು ಬಲಿ ಪಡೆದರು.
ನಂತರ ವಾರ್ನರ್, ಲಬುಷನಿಗೆ, ಹಾಗೂ ಅಲೆಕ್ಸ್ ಹ್ಯಾರಿ, ಸ್ಟೋನಿಸ್ ಹಾಗೂ ಅಬ್ಬಾಟ್ ಉಪಯುಕ್ತ ಕಾಣಿಕೆ ನೀಡಿದರು, ಇದರ ಅನುಕೂಲದಿಂದಾಗಿ 269 ರನ್ ಗಳಿಸಿದರು, ಭಾರತದ ಪರವಾಗಿ ಕುಲದೀಪ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಮೂರು ವಿಕೆಟ್ ಪಡೆದು ಗಮನ ಸೆಳೆದರು.
ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಹಾರ್ದಿಕ್ ಪಾಂಡ್ಯ (40) ಹಾಗೂ ಕೆ. ಎಲ್. ರಾಹುಲ್ (32) ರನ್ ಗಳಿಸಿದರೂ ನಂತರ ದಿಢೀರ್ ಕುಸಿತ ಕಂಡ ಹಿನ್ನೆಲೆಯಲ್ಲಿ 248 ರನ್ ಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡರು.
ಆಸ್ಟ್ರೇಲಿಯಾ ಪರವಾಗಿ ಆಡಂ ಜಂಪಾ 4 ವಿಕೆಟ್ ಹಾಗೂ ಆಗರ್ 2 ವಿಕೆಟ್ ಪಡೆದರು, ಸರಣಿಯಲ್ಲಿ ಉತ್ತಮವಾಗಿ ಬೌಲಿಂಗ್ ಮಾಡಿ ಮಿಂಚಿದ ಮಿಚೆಲ್ ಸ್ಟಾಕ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರೆ ಆಡಂ ಜಂಪಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…