ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸಂಘಟಿತ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿರೀಕ್ಷೆಯಂತೆ ತವರಿನಲ್ಲಿ ಗೆಲುವಿನ ನಗೆ ಬೀರುವ ಜೊತೆಗೆ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದರು.
ವಾರದ ಕೊನೆಯ ದಿನವಾದ ಶನಿವಾರ ಮಧ್ಯಾಹ್ನದಿಂದಲೇ ಅಭಿಮಾನಿಗಳು ಕ್ರೀಡಾಂಗಣದ ಬಳಿ ಬರಲು ಆರಂಭಿಸಿದರು, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ಆರಂಭಿಕ ಬ್ಯಾಟ್ಸ್ಮನ್ ಗಳು ಶುಭಾರಂಭ ಮಾಡಿದರು.
ಆರಂಭಿಕ ಜೋಡಿ ವಿರಾಟ್ ಕೊಹ್ಲಿ (50) ಹಾಗೂ ನಾಯಕ ಪಾಫ್ ಡುಪ್ಲೆಸಿ (22) ರನ್ ಗಳಿಸುವ ಮೂಲಕ ಭದ್ರ ಬುನಾದಿ ಹಾಕಿದರು, ಮಿಚೆಲ್ ಮಾಷ್೯ ಎಸೆತವನ್ನು ಅರಿಯದೆ ನಾಯಕ ಪಾಫ್ ವಿಕೆಟ್ ಒಪ್ಪಿಸಿದರು.
ನಂತರ ಬಂದ ಲೊಮರ್ (26), ಆಲ್ ರೌಂಡರ್ ಮ್ಯಾಕ್ಸವೆಲ್ (24) ಹಾಗೂ ಶಹಭಜ್ ಅಹಮದ್(20) ರನ್ ಗಳಿಸಿ ತಂಡದ ಮೊತ್ತವನ್ನು 170 ರ ಗಡಿ ದಾಟಿಸಿದರು, ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಮಿಚೆಲ್ ಮಾಷ್೯ ಹಾಗೂ ಸ್ಪಿನ್ನರ್ ಕುಲದೀಪ್ ಯಾದವ್ ತಲಾ ಎರಡು ವಿಕೆಟ್ ಪಡೆದರು.
ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಪ್ರವಾಸಿ ಡೆಲ್ಲಿ ತಂಡಕ್ಕೆ ಪಾನೆ೯ಲ್ ಹಾಗೂ ಮೊಹಮ್ಮದ್ ಸಿರಾಜ್ ಆರಂಭಿಕ ಆಘಾತ ನೀಡಿದರು, ತಂಡದ ಮೊತ್ತ 4 ರನ್ ಗಳಿಸಿದ್ದ ಸಂದರ್ಭದಲ್ಲಿ ಆರಂಭಿಕ ಜೋಡಿ ಪ್ರಥ್ವೀ ಶಾ (0), ಮಿಚೆಲ್ ಮಾಷ್೯ (0), ಯಶ್ ದುಳ್(1) ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
ಇಂತಹ ಸಂದರ್ಭದಲ್ಲಿ ಜೊತೆಯಾದ ನಾಯಕ ವಾರ್ನರ್ (19) ಹಾಗೂ ಕನ್ನಡಿಗ ಮನೀಷ್ ಪಾಂಡೆ (50) ರನ್ ಗಳಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು, ನಂತರ ಬಂದ ಆಲ್ ರೌಂಡರ್ ಅಕ್ಷರ್ ಪಟೇಲ್ (21), ಅಕೀಮ್ (18) ಆನ್ರೀಚ್ ನೋಕಿಯೋ (23) ರನ್ ಗಳಿಸಿದರೂ ಸಹ 23 ರನ್ ಗಳ ಸೋಲು ಅನುಭವಿಸಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರವಾಗಿ ಪಾದಾರ್ಪಣೆ ಪಂದ್ಯವಾಡಿದ ಬೌಲರ್ ವಿಜಯ್ ಕುಮಾರ್ ವೈಶಾಖ್ ಮೂರು ವಿಕೆಟ್ ಪಡೆದು ಮಿಂಚಿದರು, ಮೊಹಮ್ಮದ್ ಸಿರಾಜ್ ಎರಡು ವಿಕೆಟ್ ಪಡೆದರು. ಬ್ಯಾಟಿಂಗ್ ನಲ್ಲಿ ಮಿಂಚಿದ್ದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…