Categories: ಐಪಿಎಲ್

ಬೌಲಿಂಗ್ ದಾಳಿಗೆ ಬೆದರಿದ ಡೆಲ್ಲಿ, ತವರಿನಲ್ಲಿ ಆರ್ ಸಿಬಿಗೆ ಭರ್ಜರಿ ಜಯ!

ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸಂಘಟಿತ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿರೀಕ್ಷೆಯಂತೆ ತವರಿನಲ್ಲಿ ಗೆಲುವಿನ ನಗೆ ಬೀರುವ ಜೊತೆಗೆ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದರು.

ವಾರದ ಕೊನೆಯ ದಿನವಾದ ಶನಿವಾರ ಮಧ್ಯಾಹ್ನದಿಂದಲೇ ಅಭಿಮಾನಿಗಳು ಕ್ರೀಡಾಂಗಣದ ಬಳಿ ಬರಲು ಆರಂಭಿಸಿದರು, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ಆರಂಭಿಕ ಬ್ಯಾಟ್ಸ್‌ಮನ್ ಗಳು ಶುಭಾರಂಭ ಮಾಡಿದರು.

ಆರಂಭಿಕ ಜೋಡಿ ವಿರಾಟ್ ಕೊಹ್ಲಿ (50) ಹಾಗೂ ನಾಯಕ ಪಾಫ್ ಡುಪ್ಲೆಸಿ (22) ರನ್ ಗಳಿಸುವ ಮೂಲಕ ಭದ್ರ ಬುನಾದಿ ಹಾಕಿದರು, ಮಿಚೆಲ್ ಮಾಷ್೯ ಎಸೆತವನ್ನು ಅರಿಯದೆ ನಾಯಕ ಪಾಫ್ ವಿಕೆಟ್ ಒಪ್ಪಿಸಿದರು.

ನಂತರ ಬಂದ ಲೊಮರ್ (26), ಆಲ್ ರೌಂಡರ್ ಮ್ಯಾಕ್ಸವೆಲ್ (24) ಹಾಗೂ ಶಹಭಜ್ ಅಹಮದ್(20) ರನ್ ಗಳಿಸಿ ತಂಡದ ಮೊತ್ತವನ್ನು 170 ರ ಗಡಿ ದಾಟಿಸಿದರು, ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಮಿಚೆಲ್ ಮಾಷ್೯ ಹಾಗೂ ಸ್ಪಿನ್ನರ್ ಕುಲದೀಪ್ ಯಾದವ್ ತಲಾ ಎರಡು ವಿಕೆಟ್ ಪಡೆದರು.

ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಪ್ರವಾಸಿ ಡೆಲ್ಲಿ ತಂಡಕ್ಕೆ ಪಾನೆ೯ಲ್ ಹಾಗೂ ಮೊಹಮ್ಮದ್ ಸಿರಾಜ್ ಆರಂಭಿಕ ಆಘಾತ ನೀಡಿದರು, ತಂಡದ ಮೊತ್ತ 4 ರನ್ ಗಳಿಸಿದ್ದ ಸಂದರ್ಭದಲ್ಲಿ ಆರಂಭಿಕ ಜೋಡಿ ಪ್ರಥ್ವೀ ಶಾ (0), ಮಿಚೆಲ್ ಮಾಷ್೯ (0), ಯಶ್ ದುಳ್(1) ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಇಂತಹ ಸಂದರ್ಭದಲ್ಲಿ ಜೊತೆಯಾದ ನಾಯಕ ವಾರ್ನರ್ (19) ಹಾಗೂ ಕನ್ನಡಿಗ ಮನೀಷ್ ಪಾಂಡೆ (50) ರನ್ ಗಳಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು, ನಂತರ ಬಂದ ಆಲ್ ರೌಂಡರ್ ಅಕ್ಷರ್ ಪಟೇಲ್ (21), ಅಕೀಮ್ (18) ಆನ್ರೀಚ್ ನೋಕಿಯೋ (23) ರನ್ ಗಳಿಸಿದರೂ ಸಹ 23 ರನ್ ಗಳ ಸೋಲು ಅನುಭವಿಸಿದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರವಾಗಿ ಪಾದಾರ್ಪಣೆ ಪಂದ್ಯವಾಡಿದ ಬೌಲರ್ ವಿಜಯ್ ಕುಮಾರ್ ವೈಶಾಖ್ ಮೂರು ವಿಕೆಟ್ ಪಡೆದು ಮಿಂಚಿದರು, ಮೊಹಮ್ಮದ್ ಸಿರಾಜ್ ಎರಡು ವಿಕೆಟ್ ಪಡೆದರು. ಬ್ಯಾಟಿಂಗ್ ನಲ್ಲಿ ಮಿಂಚಿದ್ದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

5 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

13 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

14 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago