ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸಂಘಟಿತ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿರೀಕ್ಷೆಯಂತೆ ತವರಿನಲ್ಲಿ ಗೆಲುವಿನ ನಗೆ ಬೀರುವ ಜೊತೆಗೆ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದರು.
ವಾರದ ಕೊನೆಯ ದಿನವಾದ ಶನಿವಾರ ಮಧ್ಯಾಹ್ನದಿಂದಲೇ ಅಭಿಮಾನಿಗಳು ಕ್ರೀಡಾಂಗಣದ ಬಳಿ ಬರಲು ಆರಂಭಿಸಿದರು, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ಆರಂಭಿಕ ಬ್ಯಾಟ್ಸ್ಮನ್ ಗಳು ಶುಭಾರಂಭ ಮಾಡಿದರು.
ಆರಂಭಿಕ ಜೋಡಿ ವಿರಾಟ್ ಕೊಹ್ಲಿ (50) ಹಾಗೂ ನಾಯಕ ಪಾಫ್ ಡುಪ್ಲೆಸಿ (22) ರನ್ ಗಳಿಸುವ ಮೂಲಕ ಭದ್ರ ಬುನಾದಿ ಹಾಕಿದರು, ಮಿಚೆಲ್ ಮಾಷ್೯ ಎಸೆತವನ್ನು ಅರಿಯದೆ ನಾಯಕ ಪಾಫ್ ವಿಕೆಟ್ ಒಪ್ಪಿಸಿದರು.
ನಂತರ ಬಂದ ಲೊಮರ್ (26), ಆಲ್ ರೌಂಡರ್ ಮ್ಯಾಕ್ಸವೆಲ್ (24) ಹಾಗೂ ಶಹಭಜ್ ಅಹಮದ್(20) ರನ್ ಗಳಿಸಿ ತಂಡದ ಮೊತ್ತವನ್ನು 170 ರ ಗಡಿ ದಾಟಿಸಿದರು, ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಮಿಚೆಲ್ ಮಾಷ್೯ ಹಾಗೂ ಸ್ಪಿನ್ನರ್ ಕುಲದೀಪ್ ಯಾದವ್ ತಲಾ ಎರಡು ವಿಕೆಟ್ ಪಡೆದರು.
ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಪ್ರವಾಸಿ ಡೆಲ್ಲಿ ತಂಡಕ್ಕೆ ಪಾನೆ೯ಲ್ ಹಾಗೂ ಮೊಹಮ್ಮದ್ ಸಿರಾಜ್ ಆರಂಭಿಕ ಆಘಾತ ನೀಡಿದರು, ತಂಡದ ಮೊತ್ತ 4 ರನ್ ಗಳಿಸಿದ್ದ ಸಂದರ್ಭದಲ್ಲಿ ಆರಂಭಿಕ ಜೋಡಿ ಪ್ರಥ್ವೀ ಶಾ (0), ಮಿಚೆಲ್ ಮಾಷ್೯ (0), ಯಶ್ ದುಳ್(1) ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
ಇಂತಹ ಸಂದರ್ಭದಲ್ಲಿ ಜೊತೆಯಾದ ನಾಯಕ ವಾರ್ನರ್ (19) ಹಾಗೂ ಕನ್ನಡಿಗ ಮನೀಷ್ ಪಾಂಡೆ (50) ರನ್ ಗಳಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು, ನಂತರ ಬಂದ ಆಲ್ ರೌಂಡರ್ ಅಕ್ಷರ್ ಪಟೇಲ್ (21), ಅಕೀಮ್ (18) ಆನ್ರೀಚ್ ನೋಕಿಯೋ (23) ರನ್ ಗಳಿಸಿದರೂ ಸಹ 23 ರನ್ ಗಳ ಸೋಲು ಅನುಭವಿಸಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರವಾಗಿ ಪಾದಾರ್ಪಣೆ ಪಂದ್ಯವಾಡಿದ ಬೌಲರ್ ವಿಜಯ್ ಕುಮಾರ್ ವೈಶಾಖ್ ಮೂರು ವಿಕೆಟ್ ಪಡೆದು ಮಿಂಚಿದರು, ಮೊಹಮ್ಮದ್ ಸಿರಾಜ್ ಎರಡು ವಿಕೆಟ್ ಪಡೆದರು. ಬ್ಯಾಟಿಂಗ್ ನಲ್ಲಿ ಮಿಂಚಿದ್ದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…