ಬ್ಯಾಂಕಿಂಗ್‌, ಫೈನಾನ್ಸ್ ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳ ಮೇಲೆ ಸಿಎಂ ಅಸಮಾಧಾನ: ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ. ಪರಿಣಾಮ ಎದುರಿಸಲು ಸಿದ್ಧರಾಗಿ-ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ನವರು ಸಾಲ ವಸೂಲಿ ವೇಳೆ ಆರ್‌ಬಿ‌ಐ ನ ನಿಯಮಗಳನ್ನು ಮೀರಿ ಕಿರುಕುಳ ನೀಡುತ್ತಿರುವುದು ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ವರದಿಯಾಗುತ್ತಿದ್ದು, ಈ ನಿಯಮ ಬಾಹಿರ ಸಾಲ ವಸೂಲಿಗೆ ಅಂಕುಶ ಹಾಕುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಈ ವೇಳೆ ಬ್ಯಾಂಕ್, ಫೈನಾನ್ಸ್ ಹಾಗೂ ಮೈಕ್ರೋ ಫೈನಾನ್ಸ್‌ಗಳ ಪ್ರತಿನಿಧಿಗಳ ಮೇಲೆ ಪ್ರಶ್ನೆಗಳ‌ ಸುರಿಮಳೆಗೈದ ಮುಖ್ಯಮಂತ್ರಿಗಳು, ನಿಯಮ ಮೀರಿ ಸಾಲ ವಸೂಲಿ ಮಾಡಿದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದರು.

ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂತಹ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ?

ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ?

ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು? ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ?

ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ?

ಆ‌ರ್.ಬಿ.ಐ ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ? ಮರುಪಾವತಿಯ ಸಾಮರ್ಥ್ಯ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ?

ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾ‌ರ್ ಕೆವೈಸಿ ಮಾಡಿಸುತ್ತಿಲ್ಲ ಏಕೆ? ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುವುದು ತಪ್ಪುತ್ತಿತ್ತು ಅಲ್ಲವಾ?

ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ.

ಒಬ್ಬರೇ ಸಾಲಗಾರರು ಬೇರೆ ಬೇರೆ ಗುರುತಿನ ಚೀಟಿ ಕೊಟ್ಟು ಸಾಲ ಪಡೆದಿರುವುದು ನಿಮ್ಮ ದಾಖಲೆಗಳಲ್ಲಿದೆ. ಆದರೆ ಸಾಲಗಾರರು ಈ ರೀತಿ ದುರುಪಯೋಗ ಪಡಿಸಿಕೊಳ್ಳುವುದನ್ನು ತಪ್ಪಿಸಲು ಯಾವ ಪದ್ಧತಿ ಪಾಲಿಸುತ್ತಿದ್ದೀರಿ?

ರಾಜ್ಯದ ಮಹಿಳೆಯರ, ವೃದ್ಧರ ಮೇಲೆ ಫೈನಾನ್ಸ್ ನವರು ದಬ್ಬಾಳಿಕೆ ನಡೆಸಿರುವ ಪತ್ರಿಕಾ ವರದಿಗಳೂ ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ. ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ. ಪರಿಣಾಮ ಎದುರಿಸಲು ಸಿದ್ಧರಾಗಿ ಎಂದು ಬ್ಯಾಂಕಿಂಗ್‌, ಫೈನಾನ್ಸ್ ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳ ಮೇಲೆ ಸಿಎಂ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವರಾದ ಜಿ.ಪರಮೇಶ್ವರ್, ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಗೃಹ ಇಲಾಖೆ, ಒಳಾಡಳಿತ, ಕಂದಾಯ, ಗುಪ್ತಚರ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

5 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

16 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

21 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago