ಬ್ಯಾಂಕಿಂಗ್‌, ಫೈನಾನ್ಸ್ ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳ ಮೇಲೆ ಸಿಎಂ ಅಸಮಾಧಾನ: ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ. ಪರಿಣಾಮ ಎದುರಿಸಲು ಸಿದ್ಧರಾಗಿ-ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ನವರು ಸಾಲ ವಸೂಲಿ ವೇಳೆ ಆರ್‌ಬಿ‌ಐ ನ ನಿಯಮಗಳನ್ನು ಮೀರಿ ಕಿರುಕುಳ ನೀಡುತ್ತಿರುವುದು ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ವರದಿಯಾಗುತ್ತಿದ್ದು, ಈ ನಿಯಮ ಬಾಹಿರ ಸಾಲ ವಸೂಲಿಗೆ ಅಂಕುಶ ಹಾಕುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಈ ವೇಳೆ ಬ್ಯಾಂಕ್, ಫೈನಾನ್ಸ್ ಹಾಗೂ ಮೈಕ್ರೋ ಫೈನಾನ್ಸ್‌ಗಳ ಪ್ರತಿನಿಧಿಗಳ ಮೇಲೆ ಪ್ರಶ್ನೆಗಳ‌ ಸುರಿಮಳೆಗೈದ ಮುಖ್ಯಮಂತ್ರಿಗಳು, ನಿಯಮ ಮೀರಿ ಸಾಲ ವಸೂಲಿ ಮಾಡಿದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದರು.

ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂತಹ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ?

ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ?

ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು? ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ?

ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ?

ಆ‌ರ್.ಬಿ.ಐ ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ? ಮರುಪಾವತಿಯ ಸಾಮರ್ಥ್ಯ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ?

ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾ‌ರ್ ಕೆವೈಸಿ ಮಾಡಿಸುತ್ತಿಲ್ಲ ಏಕೆ? ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುವುದು ತಪ್ಪುತ್ತಿತ್ತು ಅಲ್ಲವಾ?

ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ.

ಒಬ್ಬರೇ ಸಾಲಗಾರರು ಬೇರೆ ಬೇರೆ ಗುರುತಿನ ಚೀಟಿ ಕೊಟ್ಟು ಸಾಲ ಪಡೆದಿರುವುದು ನಿಮ್ಮ ದಾಖಲೆಗಳಲ್ಲಿದೆ. ಆದರೆ ಸಾಲಗಾರರು ಈ ರೀತಿ ದುರುಪಯೋಗ ಪಡಿಸಿಕೊಳ್ಳುವುದನ್ನು ತಪ್ಪಿಸಲು ಯಾವ ಪದ್ಧತಿ ಪಾಲಿಸುತ್ತಿದ್ದೀರಿ?

ರಾಜ್ಯದ ಮಹಿಳೆಯರ, ವೃದ್ಧರ ಮೇಲೆ ಫೈನಾನ್ಸ್ ನವರು ದಬ್ಬಾಳಿಕೆ ನಡೆಸಿರುವ ಪತ್ರಿಕಾ ವರದಿಗಳೂ ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ. ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ. ಪರಿಣಾಮ ಎದುರಿಸಲು ಸಿದ್ಧರಾಗಿ ಎಂದು ಬ್ಯಾಂಕಿಂಗ್‌, ಫೈನಾನ್ಸ್ ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳ ಮೇಲೆ ಸಿಎಂ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವರಾದ ಜಿ.ಪರಮೇಶ್ವರ್, ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಗೃಹ ಇಲಾಖೆ, ಒಳಾಡಳಿತ, ಕಂದಾಯ, ಗುಪ್ತಚರ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

17 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

19 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

19 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

19 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

22 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

1 day ago