ಬ್ಯಾಂಕಿಂಗ್‌, ಫೈನಾನ್ಸ್ ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳ ಮೇಲೆ ಸಿಎಂ ಅಸಮಾಧಾನ: ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ. ಪರಿಣಾಮ ಎದುರಿಸಲು ಸಿದ್ಧರಾಗಿ-ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ನವರು ಸಾಲ ವಸೂಲಿ ವೇಳೆ ಆರ್‌ಬಿ‌ಐ ನ ನಿಯಮಗಳನ್ನು ಮೀರಿ ಕಿರುಕುಳ ನೀಡುತ್ತಿರುವುದು ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ವರದಿಯಾಗುತ್ತಿದ್ದು, ಈ ನಿಯಮ ಬಾಹಿರ ಸಾಲ ವಸೂಲಿಗೆ ಅಂಕುಶ ಹಾಕುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಈ ವೇಳೆ ಬ್ಯಾಂಕ್, ಫೈನಾನ್ಸ್ ಹಾಗೂ ಮೈಕ್ರೋ ಫೈನಾನ್ಸ್‌ಗಳ ಪ್ರತಿನಿಧಿಗಳ ಮೇಲೆ ಪ್ರಶ್ನೆಗಳ‌ ಸುರಿಮಳೆಗೈದ ಮುಖ್ಯಮಂತ್ರಿಗಳು, ನಿಯಮ ಮೀರಿ ಸಾಲ ವಸೂಲಿ ಮಾಡಿದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದರು.

ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂತಹ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ?

ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ?

ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು? ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ?

ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ?

ಆ‌ರ್.ಬಿ.ಐ ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ? ಮರುಪಾವತಿಯ ಸಾಮರ್ಥ್ಯ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ?

ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾ‌ರ್ ಕೆವೈಸಿ ಮಾಡಿಸುತ್ತಿಲ್ಲ ಏಕೆ? ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುವುದು ತಪ್ಪುತ್ತಿತ್ತು ಅಲ್ಲವಾ?

ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ.

ಒಬ್ಬರೇ ಸಾಲಗಾರರು ಬೇರೆ ಬೇರೆ ಗುರುತಿನ ಚೀಟಿ ಕೊಟ್ಟು ಸಾಲ ಪಡೆದಿರುವುದು ನಿಮ್ಮ ದಾಖಲೆಗಳಲ್ಲಿದೆ. ಆದರೆ ಸಾಲಗಾರರು ಈ ರೀತಿ ದುರುಪಯೋಗ ಪಡಿಸಿಕೊಳ್ಳುವುದನ್ನು ತಪ್ಪಿಸಲು ಯಾವ ಪದ್ಧತಿ ಪಾಲಿಸುತ್ತಿದ್ದೀರಿ?

ರಾಜ್ಯದ ಮಹಿಳೆಯರ, ವೃದ್ಧರ ಮೇಲೆ ಫೈನಾನ್ಸ್ ನವರು ದಬ್ಬಾಳಿಕೆ ನಡೆಸಿರುವ ಪತ್ರಿಕಾ ವರದಿಗಳೂ ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ. ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ. ಪರಿಣಾಮ ಎದುರಿಸಲು ಸಿದ್ಧರಾಗಿ ಎಂದು ಬ್ಯಾಂಕಿಂಗ್‌, ಫೈನಾನ್ಸ್ ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳ ಮೇಲೆ ಸಿಎಂ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವರಾದ ಜಿ.ಪರಮೇಶ್ವರ್, ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಗೃಹ ಇಲಾಖೆ, ಒಳಾಡಳಿತ, ಕಂದಾಯ, ಗುಪ್ತಚರ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

5 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

16 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

20 hours ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago

ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣ ಬೇಡ- ತಹಶೀಲ್ದಾರ್ ಮಲ್ಲಪ್ಪಗೆ ರೈತರ ಮನವಿ

ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…

2 days ago