ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿಯೋರ್ವ ಕ್ರೆಡಿಟ್ ಕಾರ್ಡ್ ಸಾಲದ ಮಿತಿ ಹೆಚ್ಚಿಸುವುದಾಗಿ ಹೇಳಿ ವ್ಯಕ್ತಿಯೊಬ್ಬರ ಎರಡು ಬ್ಯಾಂಕ್ ಖಾತೆಗಳಿಂದ 58 ಸಾವಿರ ರೂ. ಎಗರಿಸಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ನಗರದ ಬಸವೇಶ್ವರನಗರದ ನಿವಾಸಿಯಾದ ರಾಕೇಶ್ಗೆ ಡಿ.5ರಂದು ಫೋನ್ ಕರೆ ಬಂದಿತ್ತು. ಎಸ್ಬಿಐ ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿ, ಕ್ರೆಡಿಟ್ ಕಾರ್ಡ್ನ ಸಾಲದ ಮೊತ್ತದ ಮಿತಿ ಹೆಚ್ಚು ಮಾಡುತ್ತೇವೆ ಎಂದು ಹೇಳಿದ್ದಾನೆ. ಎಸ್ಬಿಐ ಬ್ಯಾಂಕ್ನವರೇ ಫೋನ್ ಮಾಡಿದ್ದಾರೆ ಎಂದು ನಂಬಿದ ರಾಕೇಶ್, ಕರೆ ಮಾಡಿದ ವ್ಯಕ್ತಿಗೆ ಆಧಾರ್ ಕಾರ್ಡ್, ಖಾತೆಯ ಮಾಹಿತಿಯೊಂದಿಗೆ ಒಟಿಪಿ ನಂಬರ್ ಕೂಡಾ ಕೊಟ್ಟಿದ್ದಾರೆ. ಇದಾದ ಬಳಿಕ ಇವರ ಎಸ್ಬಿಐ ಖಾತೆಯಲ್ಲಿದ್ದ 32 ಸಾವಿರ ರೂಪಾಯಿ ಮಾಯವಾಗಿದೆ.
ಖಾತೆಯಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದಿದೆ ಎಂದು ಹೇಳಿ ರಾಕೇಶ್ ಪತ್ನಿಯ ಬ್ಯಾಂಕ್ ಆಫ್ ಬರೋಡಾ ಖಾತೆಯ ಮಾಹಿತಿಯನ್ನೂ ಪಡೆದ ವಂಚಕ, ಖಾತೆಯಲ್ಲಿದ್ದ 26 ಸಾವಿರ ರೂಪಾಯಿ ಎಗರಿಸಿದ್ದಾನೆ. ಹೀಗೆ ತಮ್ಮ ಎರಡೂ ಬ್ಯಾಂಕ್ ಖಾತೆಯಲ್ಲಿ ಹಣ ಖಾಲಿಯಾದ ಕೂಡಲೇ ಬ್ಯಾಂಕ್ಗೆ ಹೋಗಿ ವಿಚಾರಿಸಿದ್ದಾರೆ. ಬ್ಯಾಂಕ್ನಲ್ಲಿ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ರಾಕೇಶ್ ಬೆಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜಗತ್ತು ಡಿಜಿಟಲ್ ಆಗಿ ಪರಿವರ್ತೆಯಾದ ನಂತರ ಸೈಬರ್ ಕಳ್ಳರ ಹಾವಳಿ ಹೆಚ್ಚಾಗಿದೆ. ಯುಪಿಐ ಪಿನ್ ಹಾಗೂ ಒಟಿಪಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ ಎಂದು ಬ್ಯಾಂಕ್ಗಳು ಸಂದೇಶ ರವಾನಿಸುತ್ತಲೇ ಇವೆ. ಇವುಗಳ ಕಡೆ ಗಮನಹರಿಸಿ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…