ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿಯೋರ್ವ ಕ್ರೆಡಿಟ್ ಕಾರ್ಡ್ ಸಾಲದ ಮಿತಿ ಹೆಚ್ಚಿಸುವುದಾಗಿ ಹೇಳಿ ವ್ಯಕ್ತಿಯೊಬ್ಬರ ಎರಡು ಬ್ಯಾಂಕ್ ಖಾತೆಗಳಿಂದ 58 ಸಾವಿರ ರೂ. ಎಗರಿಸಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ನಗರದ ಬಸವೇಶ್ವರನಗರದ ನಿವಾಸಿಯಾದ ರಾಕೇಶ್ಗೆ ಡಿ.5ರಂದು ಫೋನ್ ಕರೆ ಬಂದಿತ್ತು. ಎಸ್ಬಿಐ ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿ, ಕ್ರೆಡಿಟ್ ಕಾರ್ಡ್ನ ಸಾಲದ ಮೊತ್ತದ ಮಿತಿ ಹೆಚ್ಚು ಮಾಡುತ್ತೇವೆ ಎಂದು ಹೇಳಿದ್ದಾನೆ. ಎಸ್ಬಿಐ ಬ್ಯಾಂಕ್ನವರೇ ಫೋನ್ ಮಾಡಿದ್ದಾರೆ ಎಂದು ನಂಬಿದ ರಾಕೇಶ್, ಕರೆ ಮಾಡಿದ ವ್ಯಕ್ತಿಗೆ ಆಧಾರ್ ಕಾರ್ಡ್, ಖಾತೆಯ ಮಾಹಿತಿಯೊಂದಿಗೆ ಒಟಿಪಿ ನಂಬರ್ ಕೂಡಾ ಕೊಟ್ಟಿದ್ದಾರೆ. ಇದಾದ ಬಳಿಕ ಇವರ ಎಸ್ಬಿಐ ಖಾತೆಯಲ್ಲಿದ್ದ 32 ಸಾವಿರ ರೂಪಾಯಿ ಮಾಯವಾಗಿದೆ.
ಖಾತೆಯಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದಿದೆ ಎಂದು ಹೇಳಿ ರಾಕೇಶ್ ಪತ್ನಿಯ ಬ್ಯಾಂಕ್ ಆಫ್ ಬರೋಡಾ ಖಾತೆಯ ಮಾಹಿತಿಯನ್ನೂ ಪಡೆದ ವಂಚಕ, ಖಾತೆಯಲ್ಲಿದ್ದ 26 ಸಾವಿರ ರೂಪಾಯಿ ಎಗರಿಸಿದ್ದಾನೆ. ಹೀಗೆ ತಮ್ಮ ಎರಡೂ ಬ್ಯಾಂಕ್ ಖಾತೆಯಲ್ಲಿ ಹಣ ಖಾಲಿಯಾದ ಕೂಡಲೇ ಬ್ಯಾಂಕ್ಗೆ ಹೋಗಿ ವಿಚಾರಿಸಿದ್ದಾರೆ. ಬ್ಯಾಂಕ್ನಲ್ಲಿ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ರಾಕೇಶ್ ಬೆಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜಗತ್ತು ಡಿಜಿಟಲ್ ಆಗಿ ಪರಿವರ್ತೆಯಾದ ನಂತರ ಸೈಬರ್ ಕಳ್ಳರ ಹಾವಳಿ ಹೆಚ್ಚಾಗಿದೆ. ಯುಪಿಐ ಪಿನ್ ಹಾಗೂ ಒಟಿಪಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ ಎಂದು ಬ್ಯಾಂಕ್ಗಳು ಸಂದೇಶ ರವಾನಿಸುತ್ತಲೇ ಇವೆ. ಇವುಗಳ ಕಡೆ ಗಮನಹರಿಸಿ.
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…
ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…