ಬ್ಯಾಂಕ್ ಹೆಸರಲ್ಲಿ ಫೋನ್‌ ಕರೆ; OTP ಪಡೆದು ಎರಡು ಬ್ಯಾಂಕ್​​ ಖಾತೆಗಳಿಂದ 58 ಸಾವಿರ ರೂ. ವಂಚನೆ

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್​ಬಿಐ) ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿಯೋರ್ವ ಕ್ರೆಡಿಟ್ ಕಾರ್ಡ್ ಸಾಲದ ಮಿತಿ ಹೆಚ್ಚಿಸುವುದಾಗಿ ಹೇಳಿ ವ್ಯಕ್ತಿಯೊಬ್ಬರ ಎರಡು ಬ್ಯಾಂಕ್​​ ಖಾತೆಗಳಿಂದ 58 ಸಾವಿರ ರೂ. ಎಗರಿಸಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ನಗರದ ಬಸವೇಶ್ವರನಗರದ ನಿವಾಸಿಯಾದ ರಾಕೇಶ್‌ಗೆ ಡಿ.5ರಂದು ಫೋನ್​ ಕರೆ ಬಂದಿತ್ತು. ಎಸ್​ಬಿಐ ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿ, ಕ್ರೆಡಿಟ್ ಕಾರ್ಡ್‌ನ ಸಾಲದ ಮೊತ್ತದ ಮಿತಿ ಹೆಚ್ಚು ಮಾಡುತ್ತೇವೆ ಎಂದು ಹೇಳಿದ್ದಾನೆ. ಎಸ್​ಬಿಐ ಬ್ಯಾಂಕ್‌ನವರೇ ಫೋನ್ ಮಾಡಿದ್ದಾರೆ ಎಂದು ನಂಬಿದ ರಾಕೇಶ್, ಕರೆ ಮಾಡಿದ ವ್ಯಕ್ತಿಗೆ ಆಧಾರ್ ಕಾರ್ಡ್, ಖಾತೆಯ ಮಾಹಿತಿಯೊಂದಿಗೆ ಒಟಿಪಿ ನಂಬರ್ ಕೂಡಾ ಕೊಟ್ಟಿದ್ದಾರೆ. ಇದಾದ ಬಳಿಕ ಇವರ ಎಸ್​ಬಿಐ ಖಾತೆಯಲ್ಲಿದ್ದ 32 ಸಾವಿರ ರೂಪಾಯಿ ಮಾಯವಾಗಿದೆ.

ಖಾತೆಯಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದಿದೆ ಎಂದು ಹೇಳಿ ರಾಕೇಶ್ ಪತ್ನಿಯ ಬ್ಯಾಂಕ್ ಆಫ್ ಬರೋಡಾ ಖಾತೆಯ ಮಾಹಿತಿಯನ್ನೂ ಪಡೆದ ವಂಚಕ, ಖಾತೆಯಲ್ಲಿದ್ದ 26 ಸಾವಿರ ರೂಪಾಯಿ ಎಗರಿಸಿದ್ದಾನೆ. ಹೀಗೆ ತಮ್ಮ ಎರಡೂ ಬ್ಯಾಂಕ್​ ಖಾತೆಯಲ್ಲಿ ಹಣ ಖಾಲಿಯಾದ ಕೂಡಲೇ ಬ್ಯಾಂಕ್‌ಗೆ ಹೋಗಿ ವಿಚಾರಿಸಿದ್ದಾರೆ. ಬ್ಯಾಂಕ್‌ನಲ್ಲಿ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ರಾಕೇಶ್​​ ಬೆಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಜಗತ್ತು ಡಿಜಿಟಲ್​ ಆಗಿ ಪರಿವರ್ತೆಯಾದ ನಂತರ ಸೈಬರ್ ಕಳ್ಳರ ಹಾವಳಿ ಹೆಚ್ಚಾಗಿದೆ. ಯುಪಿಐ ಪಿನ್ ಹಾಗೂ ಒಟಿಪಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ ಎಂದು ಬ್ಯಾಂಕ್​ಗಳು ಸಂದೇಶ ರವಾನಿಸುತ್ತಲೇ ಇವೆ. ಇವುಗಳ ಕಡೆ ಗಮನಹರಿಸಿ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

8 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

13 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago