ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿಯೋರ್ವ ಕ್ರೆಡಿಟ್ ಕಾರ್ಡ್ ಸಾಲದ ಮಿತಿ ಹೆಚ್ಚಿಸುವುದಾಗಿ ಹೇಳಿ ವ್ಯಕ್ತಿಯೊಬ್ಬರ ಎರಡು ಬ್ಯಾಂಕ್ ಖಾತೆಗಳಿಂದ 58 ಸಾವಿರ ರೂ. ಎಗರಿಸಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ನಗರದ ಬಸವೇಶ್ವರನಗರದ ನಿವಾಸಿಯಾದ ರಾಕೇಶ್ಗೆ ಡಿ.5ರಂದು ಫೋನ್ ಕರೆ ಬಂದಿತ್ತು. ಎಸ್ಬಿಐ ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿ, ಕ್ರೆಡಿಟ್ ಕಾರ್ಡ್ನ ಸಾಲದ ಮೊತ್ತದ ಮಿತಿ ಹೆಚ್ಚು ಮಾಡುತ್ತೇವೆ ಎಂದು ಹೇಳಿದ್ದಾನೆ. ಎಸ್ಬಿಐ ಬ್ಯಾಂಕ್ನವರೇ ಫೋನ್ ಮಾಡಿದ್ದಾರೆ ಎಂದು ನಂಬಿದ ರಾಕೇಶ್, ಕರೆ ಮಾಡಿದ ವ್ಯಕ್ತಿಗೆ ಆಧಾರ್ ಕಾರ್ಡ್, ಖಾತೆಯ ಮಾಹಿತಿಯೊಂದಿಗೆ ಒಟಿಪಿ ನಂಬರ್ ಕೂಡಾ ಕೊಟ್ಟಿದ್ದಾರೆ. ಇದಾದ ಬಳಿಕ ಇವರ ಎಸ್ಬಿಐ ಖಾತೆಯಲ್ಲಿದ್ದ 32 ಸಾವಿರ ರೂಪಾಯಿ ಮಾಯವಾಗಿದೆ.
ಖಾತೆಯಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದಿದೆ ಎಂದು ಹೇಳಿ ರಾಕೇಶ್ ಪತ್ನಿಯ ಬ್ಯಾಂಕ್ ಆಫ್ ಬರೋಡಾ ಖಾತೆಯ ಮಾಹಿತಿಯನ್ನೂ ಪಡೆದ ವಂಚಕ, ಖಾತೆಯಲ್ಲಿದ್ದ 26 ಸಾವಿರ ರೂಪಾಯಿ ಎಗರಿಸಿದ್ದಾನೆ. ಹೀಗೆ ತಮ್ಮ ಎರಡೂ ಬ್ಯಾಂಕ್ ಖಾತೆಯಲ್ಲಿ ಹಣ ಖಾಲಿಯಾದ ಕೂಡಲೇ ಬ್ಯಾಂಕ್ಗೆ ಹೋಗಿ ವಿಚಾರಿಸಿದ್ದಾರೆ. ಬ್ಯಾಂಕ್ನಲ್ಲಿ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ರಾಕೇಶ್ ಬೆಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜಗತ್ತು ಡಿಜಿಟಲ್ ಆಗಿ ಪರಿವರ್ತೆಯಾದ ನಂತರ ಸೈಬರ್ ಕಳ್ಳರ ಹಾವಳಿ ಹೆಚ್ಚಾಗಿದೆ. ಯುಪಿಐ ಪಿನ್ ಹಾಗೂ ಒಟಿಪಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ ಎಂದು ಬ್ಯಾಂಕ್ಗಳು ಸಂದೇಶ ರವಾನಿಸುತ್ತಲೇ ಇವೆ. ಇವುಗಳ ಕಡೆ ಗಮನಹರಿಸಿ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…