ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿಯೋರ್ವ ಕ್ರೆಡಿಟ್ ಕಾರ್ಡ್ ಸಾಲದ ಮಿತಿ ಹೆಚ್ಚಿಸುವುದಾಗಿ ಹೇಳಿ ವ್ಯಕ್ತಿಯೊಬ್ಬರ ಎರಡು ಬ್ಯಾಂಕ್ ಖಾತೆಗಳಿಂದ 58 ಸಾವಿರ ರೂ. ಎಗರಿಸಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ನಗರದ ಬಸವೇಶ್ವರನಗರದ ನಿವಾಸಿಯಾದ ರಾಕೇಶ್ಗೆ ಡಿ.5ರಂದು ಫೋನ್ ಕರೆ ಬಂದಿತ್ತು. ಎಸ್ಬಿಐ ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿ, ಕ್ರೆಡಿಟ್ ಕಾರ್ಡ್ನ ಸಾಲದ ಮೊತ್ತದ ಮಿತಿ ಹೆಚ್ಚು ಮಾಡುತ್ತೇವೆ ಎಂದು ಹೇಳಿದ್ದಾನೆ. ಎಸ್ಬಿಐ ಬ್ಯಾಂಕ್ನವರೇ ಫೋನ್ ಮಾಡಿದ್ದಾರೆ ಎಂದು ನಂಬಿದ ರಾಕೇಶ್, ಕರೆ ಮಾಡಿದ ವ್ಯಕ್ತಿಗೆ ಆಧಾರ್ ಕಾರ್ಡ್, ಖಾತೆಯ ಮಾಹಿತಿಯೊಂದಿಗೆ ಒಟಿಪಿ ನಂಬರ್ ಕೂಡಾ ಕೊಟ್ಟಿದ್ದಾರೆ. ಇದಾದ ಬಳಿಕ ಇವರ ಎಸ್ಬಿಐ ಖಾತೆಯಲ್ಲಿದ್ದ 32 ಸಾವಿರ ರೂಪಾಯಿ ಮಾಯವಾಗಿದೆ.
ಖಾತೆಯಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದಿದೆ ಎಂದು ಹೇಳಿ ರಾಕೇಶ್ ಪತ್ನಿಯ ಬ್ಯಾಂಕ್ ಆಫ್ ಬರೋಡಾ ಖಾತೆಯ ಮಾಹಿತಿಯನ್ನೂ ಪಡೆದ ವಂಚಕ, ಖಾತೆಯಲ್ಲಿದ್ದ 26 ಸಾವಿರ ರೂಪಾಯಿ ಎಗರಿಸಿದ್ದಾನೆ. ಹೀಗೆ ತಮ್ಮ ಎರಡೂ ಬ್ಯಾಂಕ್ ಖಾತೆಯಲ್ಲಿ ಹಣ ಖಾಲಿಯಾದ ಕೂಡಲೇ ಬ್ಯಾಂಕ್ಗೆ ಹೋಗಿ ವಿಚಾರಿಸಿದ್ದಾರೆ. ಬ್ಯಾಂಕ್ನಲ್ಲಿ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ರಾಕೇಶ್ ಬೆಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜಗತ್ತು ಡಿಜಿಟಲ್ ಆಗಿ ಪರಿವರ್ತೆಯಾದ ನಂತರ ಸೈಬರ್ ಕಳ್ಳರ ಹಾವಳಿ ಹೆಚ್ಚಾಗಿದೆ. ಯುಪಿಐ ಪಿನ್ ಹಾಗೂ ಒಟಿಪಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ ಎಂದು ಬ್ಯಾಂಕ್ಗಳು ಸಂದೇಶ ರವಾನಿಸುತ್ತಲೇ ಇವೆ. ಇವುಗಳ ಕಡೆ ಗಮನಹರಿಸಿ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…