ಬ್ಯಾಂಕ್ ಹೆಸರಲ್ಲಿ ಫೋನ್‌ ಕರೆ; OTP ಪಡೆದು ಎರಡು ಬ್ಯಾಂಕ್​​ ಖಾತೆಗಳಿಂದ 58 ಸಾವಿರ ರೂ. ವಂಚನೆ

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್​ಬಿಐ) ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿಯೋರ್ವ ಕ್ರೆಡಿಟ್ ಕಾರ್ಡ್ ಸಾಲದ ಮಿತಿ ಹೆಚ್ಚಿಸುವುದಾಗಿ ಹೇಳಿ ವ್ಯಕ್ತಿಯೊಬ್ಬರ ಎರಡು ಬ್ಯಾಂಕ್​​ ಖಾತೆಗಳಿಂದ 58 ಸಾವಿರ ರೂ. ಎಗರಿಸಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ನಗರದ ಬಸವೇಶ್ವರನಗರದ ನಿವಾಸಿಯಾದ ರಾಕೇಶ್‌ಗೆ ಡಿ.5ರಂದು ಫೋನ್​ ಕರೆ ಬಂದಿತ್ತು. ಎಸ್​ಬಿಐ ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿ, ಕ್ರೆಡಿಟ್ ಕಾರ್ಡ್‌ನ ಸಾಲದ ಮೊತ್ತದ ಮಿತಿ ಹೆಚ್ಚು ಮಾಡುತ್ತೇವೆ ಎಂದು ಹೇಳಿದ್ದಾನೆ. ಎಸ್​ಬಿಐ ಬ್ಯಾಂಕ್‌ನವರೇ ಫೋನ್ ಮಾಡಿದ್ದಾರೆ ಎಂದು ನಂಬಿದ ರಾಕೇಶ್, ಕರೆ ಮಾಡಿದ ವ್ಯಕ್ತಿಗೆ ಆಧಾರ್ ಕಾರ್ಡ್, ಖಾತೆಯ ಮಾಹಿತಿಯೊಂದಿಗೆ ಒಟಿಪಿ ನಂಬರ್ ಕೂಡಾ ಕೊಟ್ಟಿದ್ದಾರೆ. ಇದಾದ ಬಳಿಕ ಇವರ ಎಸ್​ಬಿಐ ಖಾತೆಯಲ್ಲಿದ್ದ 32 ಸಾವಿರ ರೂಪಾಯಿ ಮಾಯವಾಗಿದೆ.

ಖಾತೆಯಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದಿದೆ ಎಂದು ಹೇಳಿ ರಾಕೇಶ್ ಪತ್ನಿಯ ಬ್ಯಾಂಕ್ ಆಫ್ ಬರೋಡಾ ಖಾತೆಯ ಮಾಹಿತಿಯನ್ನೂ ಪಡೆದ ವಂಚಕ, ಖಾತೆಯಲ್ಲಿದ್ದ 26 ಸಾವಿರ ರೂಪಾಯಿ ಎಗರಿಸಿದ್ದಾನೆ. ಹೀಗೆ ತಮ್ಮ ಎರಡೂ ಬ್ಯಾಂಕ್​ ಖಾತೆಯಲ್ಲಿ ಹಣ ಖಾಲಿಯಾದ ಕೂಡಲೇ ಬ್ಯಾಂಕ್‌ಗೆ ಹೋಗಿ ವಿಚಾರಿಸಿದ್ದಾರೆ. ಬ್ಯಾಂಕ್‌ನಲ್ಲಿ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ರಾಕೇಶ್​​ ಬೆಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಜಗತ್ತು ಡಿಜಿಟಲ್​ ಆಗಿ ಪರಿವರ್ತೆಯಾದ ನಂತರ ಸೈಬರ್ ಕಳ್ಳರ ಹಾವಳಿ ಹೆಚ್ಚಾಗಿದೆ. ಯುಪಿಐ ಪಿನ್ ಹಾಗೂ ಒಟಿಪಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ ಎಂದು ಬ್ಯಾಂಕ್​ಗಳು ಸಂದೇಶ ರವಾನಿಸುತ್ತಲೇ ಇವೆ. ಇವುಗಳ ಕಡೆ ಗಮನಹರಿಸಿ.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 hour ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

10 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

14 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

23 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago