ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿಯೋರ್ವ ಕ್ರೆಡಿಟ್ ಕಾರ್ಡ್ ಸಾಲದ ಮಿತಿ ಹೆಚ್ಚಿಸುವುದಾಗಿ ಹೇಳಿ ವ್ಯಕ್ತಿಯೊಬ್ಬರ ಎರಡು ಬ್ಯಾಂಕ್ ಖಾತೆಗಳಿಂದ 58 ಸಾವಿರ ರೂ. ಎಗರಿಸಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ನಗರದ ಬಸವೇಶ್ವರನಗರದ ನಿವಾಸಿಯಾದ ರಾಕೇಶ್ಗೆ ಡಿ.5ರಂದು ಫೋನ್ ಕರೆ ಬಂದಿತ್ತು. ಎಸ್ಬಿಐ ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿ, ಕ್ರೆಡಿಟ್ ಕಾರ್ಡ್ನ ಸಾಲದ ಮೊತ್ತದ ಮಿತಿ ಹೆಚ್ಚು ಮಾಡುತ್ತೇವೆ ಎಂದು ಹೇಳಿದ್ದಾನೆ. ಎಸ್ಬಿಐ ಬ್ಯಾಂಕ್ನವರೇ ಫೋನ್ ಮಾಡಿದ್ದಾರೆ ಎಂದು ನಂಬಿದ ರಾಕೇಶ್, ಕರೆ ಮಾಡಿದ ವ್ಯಕ್ತಿಗೆ ಆಧಾರ್ ಕಾರ್ಡ್, ಖಾತೆಯ ಮಾಹಿತಿಯೊಂದಿಗೆ ಒಟಿಪಿ ನಂಬರ್ ಕೂಡಾ ಕೊಟ್ಟಿದ್ದಾರೆ. ಇದಾದ ಬಳಿಕ ಇವರ ಎಸ್ಬಿಐ ಖಾತೆಯಲ್ಲಿದ್ದ 32 ಸಾವಿರ ರೂಪಾಯಿ ಮಾಯವಾಗಿದೆ.
ಖಾತೆಯಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದಿದೆ ಎಂದು ಹೇಳಿ ರಾಕೇಶ್ ಪತ್ನಿಯ ಬ್ಯಾಂಕ್ ಆಫ್ ಬರೋಡಾ ಖಾತೆಯ ಮಾಹಿತಿಯನ್ನೂ ಪಡೆದ ವಂಚಕ, ಖಾತೆಯಲ್ಲಿದ್ದ 26 ಸಾವಿರ ರೂಪಾಯಿ ಎಗರಿಸಿದ್ದಾನೆ. ಹೀಗೆ ತಮ್ಮ ಎರಡೂ ಬ್ಯಾಂಕ್ ಖಾತೆಯಲ್ಲಿ ಹಣ ಖಾಲಿಯಾದ ಕೂಡಲೇ ಬ್ಯಾಂಕ್ಗೆ ಹೋಗಿ ವಿಚಾರಿಸಿದ್ದಾರೆ. ಬ್ಯಾಂಕ್ನಲ್ಲಿ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ರಾಕೇಶ್ ಬೆಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜಗತ್ತು ಡಿಜಿಟಲ್ ಆಗಿ ಪರಿವರ್ತೆಯಾದ ನಂತರ ಸೈಬರ್ ಕಳ್ಳರ ಹಾವಳಿ ಹೆಚ್ಚಾಗಿದೆ. ಯುಪಿಐ ಪಿನ್ ಹಾಗೂ ಒಟಿಪಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ ಎಂದು ಬ್ಯಾಂಕ್ಗಳು ಸಂದೇಶ ರವಾನಿಸುತ್ತಲೇ ಇವೆ. ಇವುಗಳ ಕಡೆ ಗಮನಹರಿಸಿ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…