ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ಗಳ ವಿತರಣೆಗಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ಗಳನ್ನು ವಿತರಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ವಿಕಲಚೇತನರು ಯೋಜನೆಯ ಸೌಲಭ್ಯ ಪಡೆಯಲು ಆನ್ ಲೈನ್ ಮೂಲಕ ಸೇವಾ ಸಿಂಧು (https://seva sindhu.Karnataka. gov.in/) ಪೊರ್ಟಲ್ ನಲ್ಲಿ ಜನವರಿ 21 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿಕಲಚೇತನರು ಭಾರತದ ಪ್ರಜೆಯಾಗಿದ್ದು, ಕರ್ನಾಟಕದಲ್ಲಿ ಕನಿಷ್ಟ 10ವರ್ಷಗಳು ವಾಸವಾಗಿರಬೇಕು. ಈ ಯೋಜನೆ ಸೌಲಭ್ಯ ಪಡೆಯಲು ಕುಟುಂಬ ವಾರ್ಷಿಕ ಆದಾಯ ರೂ 2.00 ಲಕ್ಷಗಳಿಗಿಂತ ಕಡಿಮೆ ಇರಬೇಕು. ವಿಕಲಚೇತನರ ಅಧಿನಿಯಮದಲ್ಲಿ ಸೂಚಿಸಿರುವ ಹಾಗೂ ವೈದ್ಯಕೀಯ ಪ್ರಾಧಿಕಾರದಿಂದ ನೀಡಿರುವ ಗುರುತಿನ ಚೀಟಿಯೊಂದಿಗೆ ದೃಢೀಕೃತ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು. ಇತರೆ ಇಲಾಖೆಗಳು ಅಥವಾ ಸಂಘ ಸಂಸ್ಥೆಗಳಿಂದ ಬ್ಯಾಟರಿ ಚಾಲಿತ ವೀಲ್ ಚೇರ್ ಪಡೆದಿದ್ದಲ್ಲಿ ಅಂತಹವರು ಅರ್ಹರಾಗಿರುವುದಿಲ್ಲ.

ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಶೇ75% ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲಚೇತನರಾಗಿದ್ದು ಯಂತ್ರಚಾಲಿತ ದ್ವಿಚಕ್ರ ಮೋಟಾರು ವಾಹನವನ್ನು ಚಾಲನೆ ಮಾಡಲು ಸಾಮಾರ್ಥ್ಯ ಹೊಂದಿರದ ಹಾಗೂ ಕನಿಷ್ಟ ಒಂದು ಕೈ ಒಂದು ಕಣ್ಣು ಸ್ವಾಧೀನದಲ್ಲಿದ್ದು ಹಾಗೂ ಬ್ಯಾಟರಿಚಾಲಿತ ವ್ಹೀಲ್ ಚೇರ್ ಚಲಾಯಿಸಲು ಇತರೇ ಎಲ್ಲಾ ರೀತಿಯಲ್ಲಿ ಸದೃಢವಾಗಿರುವ ವಿಕಲಚೇತನರಾಗಿರಬೇಕು.
ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಸರ್ಕಾರದಿಂದ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಪಡೆದಿರಬಾರದು.

ಬ್ಯಾಟರಿ ಚಾಲಿತ ವ್ಹೀಲ್ ಚೇರ್‌ನ್ನು ಅವರ ಜೀವತಾವದಿಯಲ್ಲಿ ಯಾವುದೇ ಕಾರಣಕ್ಕೂ ಪರಭಾರೆ ಮಾಡಬಾರದು ಮಾಡಿದ್ದು ಕಂಡು ಬಂದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರ ದೂರವಾಣಿ ಸಂಖ್ಯೆ-080-29787441 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

32 minutes ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

10 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

21 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago