ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್ಚೇರ್ಗಳನ್ನು ವಿತರಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ವಿಕಲಚೇತನರು ಯೋಜನೆಯ ಸೌಲಭ್ಯ ಪಡೆಯಲು ಆನ್ ಲೈನ್ ಮೂಲಕ ಸೇವಾ ಸಿಂಧು (https://seva sindhu.Karnataka. gov.in/) ಪೊರ್ಟಲ್ ನಲ್ಲಿ ಜನವರಿ 21 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಿಕಲಚೇತನರು ಭಾರತದ ಪ್ರಜೆಯಾಗಿದ್ದು, ಕರ್ನಾಟಕದಲ್ಲಿ ಕನಿಷ್ಟ 10ವರ್ಷಗಳು ವಾಸವಾಗಿರಬೇಕು. ಈ ಯೋಜನೆ ಸೌಲಭ್ಯ ಪಡೆಯಲು ಕುಟುಂಬ ವಾರ್ಷಿಕ ಆದಾಯ ರೂ 2.00 ಲಕ್ಷಗಳಿಗಿಂತ ಕಡಿಮೆ ಇರಬೇಕು. ವಿಕಲಚೇತನರ ಅಧಿನಿಯಮದಲ್ಲಿ ಸೂಚಿಸಿರುವ ಹಾಗೂ ವೈದ್ಯಕೀಯ ಪ್ರಾಧಿಕಾರದಿಂದ ನೀಡಿರುವ ಗುರುತಿನ ಚೀಟಿಯೊಂದಿಗೆ ದೃಢೀಕೃತ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು. ಇತರೆ ಇಲಾಖೆಗಳು ಅಥವಾ ಸಂಘ ಸಂಸ್ಥೆಗಳಿಂದ ಬ್ಯಾಟರಿ ಚಾಲಿತ ವೀಲ್ ಚೇರ್ ಪಡೆದಿದ್ದಲ್ಲಿ ಅಂತಹವರು ಅರ್ಹರಾಗಿರುವುದಿಲ್ಲ.
ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಶೇ75% ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲಚೇತನರಾಗಿದ್ದು ಯಂತ್ರಚಾಲಿತ ದ್ವಿಚಕ್ರ ಮೋಟಾರು ವಾಹನವನ್ನು ಚಾಲನೆ ಮಾಡಲು ಸಾಮಾರ್ಥ್ಯ ಹೊಂದಿರದ ಹಾಗೂ ಕನಿಷ್ಟ ಒಂದು ಕೈ ಒಂದು ಕಣ್ಣು ಸ್ವಾಧೀನದಲ್ಲಿದ್ದು ಹಾಗೂ ಬ್ಯಾಟರಿಚಾಲಿತ ವ್ಹೀಲ್ ಚೇರ್ ಚಲಾಯಿಸಲು ಇತರೇ ಎಲ್ಲಾ ರೀತಿಯಲ್ಲಿ ಸದೃಢವಾಗಿರುವ ವಿಕಲಚೇತನರಾಗಿರಬೇಕು.
ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಸರ್ಕಾರದಿಂದ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಪಡೆದಿರಬಾರದು.
ಬ್ಯಾಟರಿ ಚಾಲಿತ ವ್ಹೀಲ್ ಚೇರ್ನ್ನು ಅವರ ಜೀವತಾವದಿಯಲ್ಲಿ ಯಾವುದೇ ಕಾರಣಕ್ಕೂ ಪರಭಾರೆ ಮಾಡಬಾರದು ಮಾಡಿದ್ದು ಕಂಡು ಬಂದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರ ದೂರವಾಣಿ ಸಂಖ್ಯೆ-080-29787441 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…