ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್ಚೇರ್ಗಳನ್ನು ವಿತರಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ವಿಕಲಚೇತನರು ಯೋಜನೆಯ ಸೌಲಭ್ಯ ಪಡೆಯಲು ಆನ್ ಲೈನ್ ಮೂಲಕ ಸೇವಾ ಸಿಂಧು (https://seva sindhu.Karnataka. gov.in/) ಪೊರ್ಟಲ್ ನಲ್ಲಿ ಜನವರಿ 21 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಿಕಲಚೇತನರು ಭಾರತದ ಪ್ರಜೆಯಾಗಿದ್ದು, ಕರ್ನಾಟಕದಲ್ಲಿ ಕನಿಷ್ಟ 10ವರ್ಷಗಳು ವಾಸವಾಗಿರಬೇಕು. ಈ ಯೋಜನೆ ಸೌಲಭ್ಯ ಪಡೆಯಲು ಕುಟುಂಬ ವಾರ್ಷಿಕ ಆದಾಯ ರೂ 2.00 ಲಕ್ಷಗಳಿಗಿಂತ ಕಡಿಮೆ ಇರಬೇಕು. ವಿಕಲಚೇತನರ ಅಧಿನಿಯಮದಲ್ಲಿ ಸೂಚಿಸಿರುವ ಹಾಗೂ ವೈದ್ಯಕೀಯ ಪ್ರಾಧಿಕಾರದಿಂದ ನೀಡಿರುವ ಗುರುತಿನ ಚೀಟಿಯೊಂದಿಗೆ ದೃಢೀಕೃತ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು. ಇತರೆ ಇಲಾಖೆಗಳು ಅಥವಾ ಸಂಘ ಸಂಸ್ಥೆಗಳಿಂದ ಬ್ಯಾಟರಿ ಚಾಲಿತ ವೀಲ್ ಚೇರ್ ಪಡೆದಿದ್ದಲ್ಲಿ ಅಂತಹವರು ಅರ್ಹರಾಗಿರುವುದಿಲ್ಲ.
ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಶೇ75% ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲಚೇತನರಾಗಿದ್ದು ಯಂತ್ರಚಾಲಿತ ದ್ವಿಚಕ್ರ ಮೋಟಾರು ವಾಹನವನ್ನು ಚಾಲನೆ ಮಾಡಲು ಸಾಮಾರ್ಥ್ಯ ಹೊಂದಿರದ ಹಾಗೂ ಕನಿಷ್ಟ ಒಂದು ಕೈ ಒಂದು ಕಣ್ಣು ಸ್ವಾಧೀನದಲ್ಲಿದ್ದು ಹಾಗೂ ಬ್ಯಾಟರಿಚಾಲಿತ ವ್ಹೀಲ್ ಚೇರ್ ಚಲಾಯಿಸಲು ಇತರೇ ಎಲ್ಲಾ ರೀತಿಯಲ್ಲಿ ಸದೃಢವಾಗಿರುವ ವಿಕಲಚೇತನರಾಗಿರಬೇಕು.
ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಸರ್ಕಾರದಿಂದ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಪಡೆದಿರಬಾರದು.
ಬ್ಯಾಟರಿ ಚಾಲಿತ ವ್ಹೀಲ್ ಚೇರ್ನ್ನು ಅವರ ಜೀವತಾವದಿಯಲ್ಲಿ ಯಾವುದೇ ಕಾರಣಕ್ಕೂ ಪರಭಾರೆ ಮಾಡಬಾರದು ಮಾಡಿದ್ದು ಕಂಡು ಬಂದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರ ದೂರವಾಣಿ ಸಂಖ್ಯೆ-080-29787441 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…